BREAKING NEWS

ಆರ್ಟಿಕಲ್ 370 ಕುರಿತು ಬ್ರೆಕ್ಸಿಟ್ ಮಾದರಿಯ ಜನಾಭಿಪ್ರಾಯ ಸಂಗ್ರಹಣೆ ಪ್ರಶ್ನೆಯೇ ಇಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಆರ್ಟಿಕಲ್ 370 ಹಿಂತೆಗೆತವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.

ಆರ್ಟಿಕಲ್ 370 ನ್ನು ರದ್ದುಗೊಳಿಸಿರುವುದು ಸಂವಿಧಾನಾತ್ಮಕವಾಗಿ ಕ್ರಮಬದ್ಧವಾಗಿದೆಯೋ ಇಲ್ಲವೋ ಎಂಬ ಪ್ರಶ್ನೆ ತನ್ನ ಮುಂದಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಆರ್ಟಿಕಲ್ 370 ಕುರಿತು ಬ್ರೆಕ್ಸಿಟ್ ಮಾದರಿಯ ಜನಾಭಿಪ್ರಾಯ ಸಂಗ್ರಹಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಭಾರತ ಸಾಂವಿಧಾನಿಕ ಪ್ರಜಾಪ್ರಭುತ್ವವಾಗಿದ್ದು, ಜನರ ಅಭಿಪ್ರಾಯಗಳನ್ನು ಸ್ಥಾಪಿತ ಸಂಸ್ಥೆಗಳ ಮೂಲಕವಷ್ಟೇ ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಕೋರ್ಟ್ ಹೇಳಿದೆ.

ಆರ್ಟಿಕಲ್ 370 ರದ್ದುಗೊಳಿಸಿರುವ ಕ್ರಮ ಬ್ರೆಕ್ಸಿಟ್ ಮಾದರಿಯ ರಾಜಕೀಯ ನಡೆಯಾಗಿದೆ, ಬ್ರೆಕ್ಸಿಟ್ ನಲ್ಲಿ ಬ್ರಿಟೀಷ್ ಪ್ರಜೆಗಳ ಅಭಿಪ್ರಾಯವನ್ನು ಜನಾಭಿಪ್ರಾಯ ಸಂಗ್ರಹದ ಮೂಲಕ ಪಡೆಯಲಾಗಿತ್ತು ಎಂದು ವಾದ ಮಾಡುವಾಗ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ ಬ್ರೆಕ್ಸಿಟ್ ಮಾದರಿಯ ಜನಾಭಿಪ್ರಾಯ ಸಂಗ್ರಹಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದೆ.

andolanait

Recent Posts

ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ, ಬಸ್‌, ಎಂಜಿನ್‌ ಕೆಟ್ಟು ಹೋಗಿದೆ: ಆರ್.ಅಶೋಕ್‌ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ ಅಷ್ಟೇ. ಬಸ್‌, ಎಂಜಿನ್‌ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ…

7 hours ago

ಮಡಿಕೇರಿ| ಹುಲಿ ದಾಳಿಗೆ ಜಾನುವಾರು ಬಲಿ

ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…

7 hours ago

ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ: ಶಾಸಕ ಹರೀಶ್‌ ಗೌಡ

ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ಈ…

8 hours ago

ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಜೂ.6ಕ್ಕೆ ಭಾರತಕ್ಕೆ ವಾಪಸ್‌

ನವದೆಹಲಿ: ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಜೂನ್.‌6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…

8 hours ago

3000 ರೂಗೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಸಚಿವೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…

8 hours ago

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಯು.ಟಿ.ಖಾದರ್‌

ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…

8 hours ago