ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಆರ್ಟಿಕಲ್ 370 ಹಿಂತೆಗೆತವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.
ಆರ್ಟಿಕಲ್ 370 ನ್ನು ರದ್ದುಗೊಳಿಸಿರುವುದು ಸಂವಿಧಾನಾತ್ಮಕವಾಗಿ ಕ್ರಮಬದ್ಧವಾಗಿದೆಯೋ ಇಲ್ಲವೋ ಎಂಬ ಪ್ರಶ್ನೆ ತನ್ನ ಮುಂದಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಆರ್ಟಿಕಲ್ 370 ಕುರಿತು ಬ್ರೆಕ್ಸಿಟ್ ಮಾದರಿಯ ಜನಾಭಿಪ್ರಾಯ ಸಂಗ್ರಹಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಭಾರತ ಸಾಂವಿಧಾನಿಕ ಪ್ರಜಾಪ್ರಭುತ್ವವಾಗಿದ್ದು, ಜನರ ಅಭಿಪ್ರಾಯಗಳನ್ನು ಸ್ಥಾಪಿತ ಸಂಸ್ಥೆಗಳ ಮೂಲಕವಷ್ಟೇ ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಕೋರ್ಟ್ ಹೇಳಿದೆ.
ಆರ್ಟಿಕಲ್ 370 ರದ್ದುಗೊಳಿಸಿರುವ ಕ್ರಮ ಬ್ರೆಕ್ಸಿಟ್ ಮಾದರಿಯ ರಾಜಕೀಯ ನಡೆಯಾಗಿದೆ, ಬ್ರೆಕ್ಸಿಟ್ ನಲ್ಲಿ ಬ್ರಿಟೀಷ್ ಪ್ರಜೆಗಳ ಅಭಿಪ್ರಾಯವನ್ನು ಜನಾಭಿಪ್ರಾಯ ಸಂಗ್ರಹದ ಮೂಲಕ ಪಡೆಯಲಾಗಿತ್ತು ಎಂದು ವಾದ ಮಾಡುವಾಗ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ ಬ್ರೆಕ್ಸಿಟ್ ಮಾದರಿಯ ಜನಾಭಿಪ್ರಾಯ ಸಂಗ್ರಹಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದೆ.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…