BREAKING NEWS

ಬ್ರಿಜ್ ಭೂಷಣ್ ಅವಕಾಶ ಸಿಕ್ಕಾಗೆಲ್ಲಾ ಲೈಂಗಿಕ ಕಿರುಕುಳಕ್ಕೆ ಯತ್ನಿಸುತ್ತಿದ್ದರು : ದೆಹಲಿ ಪೊಲೀಸ್

ನವದೆಹಲಿ : ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಅವಕಾಶ ಸಿಕ್ಕಾಗಲೆಲ್ಲಾ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಹಲವು ಉನ್ನತ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಶನಿವಾರ ಕೋರ್ಟ್‌ಗೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ. ಈ ವೇಳೆ ಬ್ರಿಜ್ ಭೂಷಣ್ ವಿರುದ್ಧ ಗಂಭೀರ ಆರೋಪ ಮಾಡಿರುವ ದೆಹಲಿ ಪೊಲೀಸರು ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪುರಾವೆಗಳಿವೆ ಎಂದು ವಾದಿಸಿದ್ದಾರೆ.

ಮಹಿಳಾ ಕುಸ್ತಿಪಟುವೊಬ್ಬರ ದೂರನ್ನು ಉಲ್ಲೇಖಿಸಿ, ಹೇಳಿಕೆ ನೀಡಿದ ದೆಹಲಿ ಪೊಲೀಸರು, ತಜಕಿಸ್ತಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರೋಪಿ ದೂರುದಾರರನ್ನು ಕೋಣೆಗೆ ಕರೆದು ಬಲವಂತವಾಗಿ ತಬ್ಬಿಕೊಂಡಿದ್ದಾರೆ. ದೂರುದಾರರು ಇದನ್ನು ವಿರೋಧಿಸಿದಾಗ ಬ್ರಿಜ್ ಭೂಷಣ್ ತಾನು ನಿಮ್ಮ ತಂದೆಯಂತೆ ಎಂದು ಹೇಳಿ ತಪ್ಪನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ. ಅವರಿಗೆ ತಮ್ಮ ಕೃತ್ಯಗಳ ಬಗ್ಗೆ ಸಂಪೂರ್ಣ ಅರಿವಿತ್ತು ಎಂಬುದು ಇಲ್ಲಿ ಸ್ಪಷ್ಟವಾಗಿ ತೋರುತ್ತದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಮತ್ತೊಂದು ದೂರನ್ನು ಉಲ್ಲೇಖಿಸಿ, ತಜಕಿಸ್ತಾನದಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್ ಸಂದರ್ಭದಲ್ಲಿ, ಬ್ರಿಜ್ ಭೂಷಣ್ ಶರಣ್ ಸಿಂಗ್ ಅನುಮತಿಯಿಲ್ಲದೆ ತನ್ನ ಅಂಗಿಯನ್ನು ಮೇಲಕ್ಕೆತ್ತಿ, ಅನುಚಿತವಾಗಿ ತನ್ನ ಹೊಟ್ಟೆಯನ್ನು ಮುಟ್ಟಿದ್ದಾರೆ ಎಂದು ಮಹಿಳಾ ಕುಸ್ತಿಪಟು ಹೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್‌ನ ಸೊಹ್ರಾಬುದ್ದೀನ್ ಎನ್‌ಕೌಂಟರ್ ಪ್ರಕರಣವನ್ನು ಉಲ್ಲೇಖಿಸಿ, ಆ ಪ್ರಕರಣದಲ್ಲಿ ಹಲವಾರು ಎಫ್‌ಐಆರ್‌ಗಳನ್ನು ಪ್ರತ್ಯೇಕವಾಗಿ ದಾಖಲಿಸಲಾಗಿದೆ. ಆದರೆ ನ್ಯಾಯಾಲಯವು ಎಲ್ಲವನ್ನೂ ಒಂದೇ ಸ್ಥಳದಲ್ಲಿ ಆಲಿಸಿದೆ ಎಂದು ಹೇಳಿದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪಗಳ ತನಿಖೆಗಾಗಿ ಸರ್ಕಾರ ರಚಿಸಿದ್ದ ಮೇಲ್ವಿಚಾರಣಾ ಸಮಿತಿಯು ಅವರನ್ನು ದೋಷಮುಕ್ತಗೊಳಿಸಿಲ್ಲ ಎಂದು ದೆಹಲಿ ಪೊಲೀಸರು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿದ್ದರು.

ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ಪ್ರತಿಭಟನೆಯ ನಂತರ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಮಾಡಿದ ಆರೋಪಗಳನ್ನು ತನಿಖೆ ಮಾಡಲು ಕೇಂದ್ರ ಕ್ರೀಡಾ ಸಚಿವಾಲಯವು ಭಾರತೀಯ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದ ಉಸ್ತುವಾರಿ ಸಮಿತಿಯನ್ನು ರಚಿಸಿತ್ತು. ಅದರ ವರದಿಯನ್ನು ಸಾರ್ವಜನಿಕಗೊಳಿಸಲಾಗಿಲ್ಲ. ಆದರೆ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಆರೋಪಗಳನ್ನು ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರಿಗೆ ಪ್ರತಿಯನ್ನು ನೀಡಲಾಗಿದೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದರೆ ಗರಿಷ್ಠ 3 ವರ್ಷಗಳ ಜೈಲು ಶಿಕ್ಷೆಯಾಗುತ್ತದೆ. 6 ಬಾರಿ ಸಂಸದರಾಗಿದ್ದ ಅವರ ವಿರುದ್ಧ ಜೂನ್ 15 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರು. ಮುಂದಿನ ವಿಚಾರಣೆ ಅಕ್ಟೋಬರ್ 7 ರಂದು ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago