BREAKING NEWS

ಬ್ರಿಜ್ ಭೂಷಣ್ ಅವಕಾಶ ಸಿಕ್ಕಾಗೆಲ್ಲಾ ಲೈಂಗಿಕ ಕಿರುಕುಳಕ್ಕೆ ಯತ್ನಿಸುತ್ತಿದ್ದರು : ದೆಹಲಿ ಪೊಲೀಸ್

ನವದೆಹಲಿ : ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಅವಕಾಶ ಸಿಕ್ಕಾಗಲೆಲ್ಲಾ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಹಲವು ಉನ್ನತ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಶನಿವಾರ ಕೋರ್ಟ್‌ಗೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ. ಈ ವೇಳೆ ಬ್ರಿಜ್ ಭೂಷಣ್ ವಿರುದ್ಧ ಗಂಭೀರ ಆರೋಪ ಮಾಡಿರುವ ದೆಹಲಿ ಪೊಲೀಸರು ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪುರಾವೆಗಳಿವೆ ಎಂದು ವಾದಿಸಿದ್ದಾರೆ.

ಮಹಿಳಾ ಕುಸ್ತಿಪಟುವೊಬ್ಬರ ದೂರನ್ನು ಉಲ್ಲೇಖಿಸಿ, ಹೇಳಿಕೆ ನೀಡಿದ ದೆಹಲಿ ಪೊಲೀಸರು, ತಜಕಿಸ್ತಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರೋಪಿ ದೂರುದಾರರನ್ನು ಕೋಣೆಗೆ ಕರೆದು ಬಲವಂತವಾಗಿ ತಬ್ಬಿಕೊಂಡಿದ್ದಾರೆ. ದೂರುದಾರರು ಇದನ್ನು ವಿರೋಧಿಸಿದಾಗ ಬ್ರಿಜ್ ಭೂಷಣ್ ತಾನು ನಿಮ್ಮ ತಂದೆಯಂತೆ ಎಂದು ಹೇಳಿ ತಪ್ಪನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ. ಅವರಿಗೆ ತಮ್ಮ ಕೃತ್ಯಗಳ ಬಗ್ಗೆ ಸಂಪೂರ್ಣ ಅರಿವಿತ್ತು ಎಂಬುದು ಇಲ್ಲಿ ಸ್ಪಷ್ಟವಾಗಿ ತೋರುತ್ತದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಮತ್ತೊಂದು ದೂರನ್ನು ಉಲ್ಲೇಖಿಸಿ, ತಜಕಿಸ್ತಾನದಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್ ಸಂದರ್ಭದಲ್ಲಿ, ಬ್ರಿಜ್ ಭೂಷಣ್ ಶರಣ್ ಸಿಂಗ್ ಅನುಮತಿಯಿಲ್ಲದೆ ತನ್ನ ಅಂಗಿಯನ್ನು ಮೇಲಕ್ಕೆತ್ತಿ, ಅನುಚಿತವಾಗಿ ತನ್ನ ಹೊಟ್ಟೆಯನ್ನು ಮುಟ್ಟಿದ್ದಾರೆ ಎಂದು ಮಹಿಳಾ ಕುಸ್ತಿಪಟು ಹೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್‌ನ ಸೊಹ್ರಾಬುದ್ದೀನ್ ಎನ್‌ಕೌಂಟರ್ ಪ್ರಕರಣವನ್ನು ಉಲ್ಲೇಖಿಸಿ, ಆ ಪ್ರಕರಣದಲ್ಲಿ ಹಲವಾರು ಎಫ್‌ಐಆರ್‌ಗಳನ್ನು ಪ್ರತ್ಯೇಕವಾಗಿ ದಾಖಲಿಸಲಾಗಿದೆ. ಆದರೆ ನ್ಯಾಯಾಲಯವು ಎಲ್ಲವನ್ನೂ ಒಂದೇ ಸ್ಥಳದಲ್ಲಿ ಆಲಿಸಿದೆ ಎಂದು ಹೇಳಿದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪಗಳ ತನಿಖೆಗಾಗಿ ಸರ್ಕಾರ ರಚಿಸಿದ್ದ ಮೇಲ್ವಿಚಾರಣಾ ಸಮಿತಿಯು ಅವರನ್ನು ದೋಷಮುಕ್ತಗೊಳಿಸಿಲ್ಲ ಎಂದು ದೆಹಲಿ ಪೊಲೀಸರು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿದ್ದರು.

ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ಪ್ರತಿಭಟನೆಯ ನಂತರ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಮಾಡಿದ ಆರೋಪಗಳನ್ನು ತನಿಖೆ ಮಾಡಲು ಕೇಂದ್ರ ಕ್ರೀಡಾ ಸಚಿವಾಲಯವು ಭಾರತೀಯ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದ ಉಸ್ತುವಾರಿ ಸಮಿತಿಯನ್ನು ರಚಿಸಿತ್ತು. ಅದರ ವರದಿಯನ್ನು ಸಾರ್ವಜನಿಕಗೊಳಿಸಲಾಗಿಲ್ಲ. ಆದರೆ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಆರೋಪಗಳನ್ನು ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರಿಗೆ ಪ್ರತಿಯನ್ನು ನೀಡಲಾಗಿದೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದರೆ ಗರಿಷ್ಠ 3 ವರ್ಷಗಳ ಜೈಲು ಶಿಕ್ಷೆಯಾಗುತ್ತದೆ. 6 ಬಾರಿ ಸಂಸದರಾಗಿದ್ದ ಅವರ ವಿರುದ್ಧ ಜೂನ್ 15 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರು. ಮುಂದಿನ ವಿಚಾರಣೆ ಅಕ್ಟೋಬರ್ 7 ರಂದು ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ.

lokesh

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago