BREAKING NEWS

ಬ್ರಿಜ್ ಭೂಷಣ್ ಅವಕಾಶ ಸಿಕ್ಕಾಗೆಲ್ಲಾ ಲೈಂಗಿಕ ಕಿರುಕುಳಕ್ಕೆ ಯತ್ನಿಸುತ್ತಿದ್ದರು : ದೆಹಲಿ ಪೊಲೀಸ್

ನವದೆಹಲಿ : ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಅವಕಾಶ ಸಿಕ್ಕಾಗಲೆಲ್ಲಾ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಹಲವು ಉನ್ನತ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಶನಿವಾರ ಕೋರ್ಟ್‌ಗೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ. ಈ ವೇಳೆ ಬ್ರಿಜ್ ಭೂಷಣ್ ವಿರುದ್ಧ ಗಂಭೀರ ಆರೋಪ ಮಾಡಿರುವ ದೆಹಲಿ ಪೊಲೀಸರು ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪುರಾವೆಗಳಿವೆ ಎಂದು ವಾದಿಸಿದ್ದಾರೆ.

ಮಹಿಳಾ ಕುಸ್ತಿಪಟುವೊಬ್ಬರ ದೂರನ್ನು ಉಲ್ಲೇಖಿಸಿ, ಹೇಳಿಕೆ ನೀಡಿದ ದೆಹಲಿ ಪೊಲೀಸರು, ತಜಕಿಸ್ತಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರೋಪಿ ದೂರುದಾರರನ್ನು ಕೋಣೆಗೆ ಕರೆದು ಬಲವಂತವಾಗಿ ತಬ್ಬಿಕೊಂಡಿದ್ದಾರೆ. ದೂರುದಾರರು ಇದನ್ನು ವಿರೋಧಿಸಿದಾಗ ಬ್ರಿಜ್ ಭೂಷಣ್ ತಾನು ನಿಮ್ಮ ತಂದೆಯಂತೆ ಎಂದು ಹೇಳಿ ತಪ್ಪನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ. ಅವರಿಗೆ ತಮ್ಮ ಕೃತ್ಯಗಳ ಬಗ್ಗೆ ಸಂಪೂರ್ಣ ಅರಿವಿತ್ತು ಎಂಬುದು ಇಲ್ಲಿ ಸ್ಪಷ್ಟವಾಗಿ ತೋರುತ್ತದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಮತ್ತೊಂದು ದೂರನ್ನು ಉಲ್ಲೇಖಿಸಿ, ತಜಕಿಸ್ತಾನದಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್ ಸಂದರ್ಭದಲ್ಲಿ, ಬ್ರಿಜ್ ಭೂಷಣ್ ಶರಣ್ ಸಿಂಗ್ ಅನುಮತಿಯಿಲ್ಲದೆ ತನ್ನ ಅಂಗಿಯನ್ನು ಮೇಲಕ್ಕೆತ್ತಿ, ಅನುಚಿತವಾಗಿ ತನ್ನ ಹೊಟ್ಟೆಯನ್ನು ಮುಟ್ಟಿದ್ದಾರೆ ಎಂದು ಮಹಿಳಾ ಕುಸ್ತಿಪಟು ಹೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್‌ನ ಸೊಹ್ರಾಬುದ್ದೀನ್ ಎನ್‌ಕೌಂಟರ್ ಪ್ರಕರಣವನ್ನು ಉಲ್ಲೇಖಿಸಿ, ಆ ಪ್ರಕರಣದಲ್ಲಿ ಹಲವಾರು ಎಫ್‌ಐಆರ್‌ಗಳನ್ನು ಪ್ರತ್ಯೇಕವಾಗಿ ದಾಖಲಿಸಲಾಗಿದೆ. ಆದರೆ ನ್ಯಾಯಾಲಯವು ಎಲ್ಲವನ್ನೂ ಒಂದೇ ಸ್ಥಳದಲ್ಲಿ ಆಲಿಸಿದೆ ಎಂದು ಹೇಳಿದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪಗಳ ತನಿಖೆಗಾಗಿ ಸರ್ಕಾರ ರಚಿಸಿದ್ದ ಮೇಲ್ವಿಚಾರಣಾ ಸಮಿತಿಯು ಅವರನ್ನು ದೋಷಮುಕ್ತಗೊಳಿಸಿಲ್ಲ ಎಂದು ದೆಹಲಿ ಪೊಲೀಸರು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿದ್ದರು.

ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ಪ್ರತಿಭಟನೆಯ ನಂತರ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಮಾಡಿದ ಆರೋಪಗಳನ್ನು ತನಿಖೆ ಮಾಡಲು ಕೇಂದ್ರ ಕ್ರೀಡಾ ಸಚಿವಾಲಯವು ಭಾರತೀಯ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದ ಉಸ್ತುವಾರಿ ಸಮಿತಿಯನ್ನು ರಚಿಸಿತ್ತು. ಅದರ ವರದಿಯನ್ನು ಸಾರ್ವಜನಿಕಗೊಳಿಸಲಾಗಿಲ್ಲ. ಆದರೆ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಆರೋಪಗಳನ್ನು ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರಿಗೆ ಪ್ರತಿಯನ್ನು ನೀಡಲಾಗಿದೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದರೆ ಗರಿಷ್ಠ 3 ವರ್ಷಗಳ ಜೈಲು ಶಿಕ್ಷೆಯಾಗುತ್ತದೆ. 6 ಬಾರಿ ಸಂಸದರಾಗಿದ್ದ ಅವರ ವಿರುದ್ಧ ಜೂನ್ 15 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರು. ಮುಂದಿನ ವಿಚಾರಣೆ ಅಕ್ಟೋಬರ್ 7 ರಂದು ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ.

lokesh

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

2 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

3 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

5 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

6 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

7 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

7 hours ago