BREAKING NEWS

ಪತ್ನಿ ಅಕ್ಷತಾ ಮೂರ್ತಿಯೊಂದಿಗೆ ಅಕ್ಷರಧಾಮ ದೇವಾಲಯಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭೇಟಿ

ನವದೆಹಲಿ : ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಪತ್ನಿ ಅಕ್ಷತಾ ಮೂರ್ತಿಯವರೊಂದಿಗೆ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬ್ರಿಟನ್ ಪ್ರಧಾನಿ ಆದ ಬಳಿಕ ರಿಷಿ ಸುನಾಕ್ ಅವರು ಹಲವು ಬಾರಿ ತಮ್ಮ ಭಾರತೀಯ ಮೂಲದ ಬಗ್ಗೆ ಹೇಳಿಕೊಂಡಿದ್ದಾರೆ. ನಾನು ಒಬ್ಬ ಹೆಮ್ಮೆಯ ಭಾರತೀಯ ಎಂದಿರುವ ರಿಷಿ ಸುನಾಕ್, ನನ್ನ ಪೂರ್ವಜರು ಭಾರತೀಯರು ಎಂದು ಹೇಳಿದ್ದಾರೆ. ಈ ಮೂಲಕ ಭಾರತದ ಜೊತೆಗೆ ಇರುವ ತಮ್ಮ ನಂಟನ್ನು ವಿವರಿಸುತ್ತಾರೆ. ಇದೀಗ ಜಿ – 20 ಶೃಂಗ ಸಭೆಯ ಕಾರ್ಯದೊತ್ತಡದ ನಡುವೆಯೂ ಅಕ್ಷರಧಾಮ ದೇಗುಲಕ್ಕೆ ಭೇಟಿ ನೀಡಿ ತಮ್ಮ ಧಾರ್ಮಿಕ ನಂಬಿಕೆಯನ್ನು ಸಾರಿದ್ದಾರೆ.

ಕಳೆದ ತಿಂಗಳು ತಮ್ಮ ಧಾರ್ಮಿಕ ನಂಬಿಕೆ ಕುರಿತು ಮಾತನಾಡಿದ್ದ ರಿಷಿ ಸುನಾಕ್, ಹಿಂದೂ ಧರ್ಮದ ಆದರ್ಶಗಳು ಹಾಗೂ ತತ್ವಗಳು ನನ್ನ ಜೀವನದ ಹಲವು ಆಯಾಮಗಳಲ್ಲಿ ನೆರವಿಗೆ ಬಂದಿವೆ ಎಂದು ವಿವರಿಸಿದ್ದರು. ಧೈರ್ಯ, ಶಕ್ತಿ ಹಾಗೂ ದೃಢತೆಯನ್ನು ತಂದುಕೊಟ್ಟಿದೆ ಎಂದು ಹೇಳಿದ್ದರು. ಒಂದು ದೇಶದ ನಾಯಕನಾಗಿ ನಾನು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಲು ನೆರವಾಗಿದೆ ಎಂದು ರಿಷಿ ಸುನಾಕ್ ಹೇಳಿದ್ದರು.

ದೇವಾಲಯದಲ್ಲಿ ಪ್ರಾರ್ಥನೆ, ಪೂಜೆ ಸಲ್ಲಿಸಿದ ನಂತರ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು.ಸುನಕ್ ಅವರ ಭೇಟಿಯ ಹಿನ್ನೆಲೆಯಲ್ಲಿ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು.

ಎರಡು ದಿನಗಳ ಜಿ 20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸುನಕ್ ಅವರು ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಭಾರತಕ್ಕೆ ಬಂದಿದ್ದಾರೆ.ಕಳೆದ ವರ್ಷ ಅಕ್ಟೋಬರ್‍ ನಲ್ಲಿ ಯುಕೆ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಿಷಿ ಸುನಕ್ ಅವರು ಪ್ರಧಾನಿಯಾಗಿ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ.

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ಕುರಿತು ಅಕ್ಷರಧಾಮ ದೇವಾಲಯದ ನಿರ್ದೇಶಕ ಜ್ಯೋತಿಂದ್ರ ದವೆ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿ, ಅವರ ಅನುಭವ ಅಸಾಧಾರಣವಾಗಿತ್ತು. ಅವರು ಬಹಳ ನಂಬಿಕೆಯಿಂದ ಪೂಜೆ ಮತ್ತು ಆರತಿಯನ್ನು ಮಾಡಿದರು. ನಾವು ಅವರಿಗೆ ದೇವಾಲಯವನ್ನು ತೋರಿಸಿದ್ದೇವೆ. ನಂತರ ದೇವಸ್ಥಾನದ ಮಾದರಿಯನ್ನು ಉಡುಗೊರೆಯಾಗಿ ನೀಡಿದೆವು. ಅವರು ಇಲ್ಲಿ ಪ್ರತಿ ನಿಮಿಷವನ್ನು ಆನಂದಿಸಿದರು. ಅವರ ಪತ್ನಿ ಅಕ್ಷತಾ ಮೂರ್ತಿ ಸಹ ಖುಷಿಪಟ್ಟರು ಎಂದರು.

lokesh

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

4 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

4 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

4 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

4 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

4 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

4 hours ago