BREAKING NEWS

ಪತ್ನಿ ಅಕ್ಷತಾ ಮೂರ್ತಿಯೊಂದಿಗೆ ಅಕ್ಷರಧಾಮ ದೇವಾಲಯಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭೇಟಿ

ನವದೆಹಲಿ : ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಪತ್ನಿ ಅಕ್ಷತಾ ಮೂರ್ತಿಯವರೊಂದಿಗೆ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬ್ರಿಟನ್ ಪ್ರಧಾನಿ ಆದ ಬಳಿಕ ರಿಷಿ ಸುನಾಕ್ ಅವರು ಹಲವು ಬಾರಿ ತಮ್ಮ ಭಾರತೀಯ ಮೂಲದ ಬಗ್ಗೆ ಹೇಳಿಕೊಂಡಿದ್ದಾರೆ. ನಾನು ಒಬ್ಬ ಹೆಮ್ಮೆಯ ಭಾರತೀಯ ಎಂದಿರುವ ರಿಷಿ ಸುನಾಕ್, ನನ್ನ ಪೂರ್ವಜರು ಭಾರತೀಯರು ಎಂದು ಹೇಳಿದ್ದಾರೆ. ಈ ಮೂಲಕ ಭಾರತದ ಜೊತೆಗೆ ಇರುವ ತಮ್ಮ ನಂಟನ್ನು ವಿವರಿಸುತ್ತಾರೆ. ಇದೀಗ ಜಿ – 20 ಶೃಂಗ ಸಭೆಯ ಕಾರ್ಯದೊತ್ತಡದ ನಡುವೆಯೂ ಅಕ್ಷರಧಾಮ ದೇಗುಲಕ್ಕೆ ಭೇಟಿ ನೀಡಿ ತಮ್ಮ ಧಾರ್ಮಿಕ ನಂಬಿಕೆಯನ್ನು ಸಾರಿದ್ದಾರೆ.

ಕಳೆದ ತಿಂಗಳು ತಮ್ಮ ಧಾರ್ಮಿಕ ನಂಬಿಕೆ ಕುರಿತು ಮಾತನಾಡಿದ್ದ ರಿಷಿ ಸುನಾಕ್, ಹಿಂದೂ ಧರ್ಮದ ಆದರ್ಶಗಳು ಹಾಗೂ ತತ್ವಗಳು ನನ್ನ ಜೀವನದ ಹಲವು ಆಯಾಮಗಳಲ್ಲಿ ನೆರವಿಗೆ ಬಂದಿವೆ ಎಂದು ವಿವರಿಸಿದ್ದರು. ಧೈರ್ಯ, ಶಕ್ತಿ ಹಾಗೂ ದೃಢತೆಯನ್ನು ತಂದುಕೊಟ್ಟಿದೆ ಎಂದು ಹೇಳಿದ್ದರು. ಒಂದು ದೇಶದ ನಾಯಕನಾಗಿ ನಾನು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಲು ನೆರವಾಗಿದೆ ಎಂದು ರಿಷಿ ಸುನಾಕ್ ಹೇಳಿದ್ದರು.

ದೇವಾಲಯದಲ್ಲಿ ಪ್ರಾರ್ಥನೆ, ಪೂಜೆ ಸಲ್ಲಿಸಿದ ನಂತರ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು.ಸುನಕ್ ಅವರ ಭೇಟಿಯ ಹಿನ್ನೆಲೆಯಲ್ಲಿ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು.

ಎರಡು ದಿನಗಳ ಜಿ 20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸುನಕ್ ಅವರು ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಭಾರತಕ್ಕೆ ಬಂದಿದ್ದಾರೆ.ಕಳೆದ ವರ್ಷ ಅಕ್ಟೋಬರ್‍ ನಲ್ಲಿ ಯುಕೆ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಿಷಿ ಸುನಕ್ ಅವರು ಪ್ರಧಾನಿಯಾಗಿ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ.

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ಕುರಿತು ಅಕ್ಷರಧಾಮ ದೇವಾಲಯದ ನಿರ್ದೇಶಕ ಜ್ಯೋತಿಂದ್ರ ದವೆ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿ, ಅವರ ಅನುಭವ ಅಸಾಧಾರಣವಾಗಿತ್ತು. ಅವರು ಬಹಳ ನಂಬಿಕೆಯಿಂದ ಪೂಜೆ ಮತ್ತು ಆರತಿಯನ್ನು ಮಾಡಿದರು. ನಾವು ಅವರಿಗೆ ದೇವಾಲಯವನ್ನು ತೋರಿಸಿದ್ದೇವೆ. ನಂತರ ದೇವಸ್ಥಾನದ ಮಾದರಿಯನ್ನು ಉಡುಗೊರೆಯಾಗಿ ನೀಡಿದೆವು. ಅವರು ಇಲ್ಲಿ ಪ್ರತಿ ನಿಮಿಷವನ್ನು ಆನಂದಿಸಿದರು. ಅವರ ಪತ್ನಿ ಅಕ್ಷತಾ ಮೂರ್ತಿ ಸಹ ಖುಷಿಪಟ್ಟರು ಎಂದರು.

lokesh

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

7 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

7 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

7 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

7 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

7 hours ago