BREAKING NEWS

ಪತ್ನಿ ಅಕ್ಷತಾ ಮೂರ್ತಿಯೊಂದಿಗೆ ಅಕ್ಷರಧಾಮ ದೇವಾಲಯಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭೇಟಿ

ನವದೆಹಲಿ : ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಪತ್ನಿ ಅಕ್ಷತಾ ಮೂರ್ತಿಯವರೊಂದಿಗೆ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬ್ರಿಟನ್ ಪ್ರಧಾನಿ ಆದ ಬಳಿಕ ರಿಷಿ ಸುನಾಕ್ ಅವರು ಹಲವು ಬಾರಿ ತಮ್ಮ ಭಾರತೀಯ ಮೂಲದ ಬಗ್ಗೆ ಹೇಳಿಕೊಂಡಿದ್ದಾರೆ. ನಾನು ಒಬ್ಬ ಹೆಮ್ಮೆಯ ಭಾರತೀಯ ಎಂದಿರುವ ರಿಷಿ ಸುನಾಕ್, ನನ್ನ ಪೂರ್ವಜರು ಭಾರತೀಯರು ಎಂದು ಹೇಳಿದ್ದಾರೆ. ಈ ಮೂಲಕ ಭಾರತದ ಜೊತೆಗೆ ಇರುವ ತಮ್ಮ ನಂಟನ್ನು ವಿವರಿಸುತ್ತಾರೆ. ಇದೀಗ ಜಿ – 20 ಶೃಂಗ ಸಭೆಯ ಕಾರ್ಯದೊತ್ತಡದ ನಡುವೆಯೂ ಅಕ್ಷರಧಾಮ ದೇಗುಲಕ್ಕೆ ಭೇಟಿ ನೀಡಿ ತಮ್ಮ ಧಾರ್ಮಿಕ ನಂಬಿಕೆಯನ್ನು ಸಾರಿದ್ದಾರೆ.

ಕಳೆದ ತಿಂಗಳು ತಮ್ಮ ಧಾರ್ಮಿಕ ನಂಬಿಕೆ ಕುರಿತು ಮಾತನಾಡಿದ್ದ ರಿಷಿ ಸುನಾಕ್, ಹಿಂದೂ ಧರ್ಮದ ಆದರ್ಶಗಳು ಹಾಗೂ ತತ್ವಗಳು ನನ್ನ ಜೀವನದ ಹಲವು ಆಯಾಮಗಳಲ್ಲಿ ನೆರವಿಗೆ ಬಂದಿವೆ ಎಂದು ವಿವರಿಸಿದ್ದರು. ಧೈರ್ಯ, ಶಕ್ತಿ ಹಾಗೂ ದೃಢತೆಯನ್ನು ತಂದುಕೊಟ್ಟಿದೆ ಎಂದು ಹೇಳಿದ್ದರು. ಒಂದು ದೇಶದ ನಾಯಕನಾಗಿ ನಾನು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಲು ನೆರವಾಗಿದೆ ಎಂದು ರಿಷಿ ಸುನಾಕ್ ಹೇಳಿದ್ದರು.

ದೇವಾಲಯದಲ್ಲಿ ಪ್ರಾರ್ಥನೆ, ಪೂಜೆ ಸಲ್ಲಿಸಿದ ನಂತರ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು.ಸುನಕ್ ಅವರ ಭೇಟಿಯ ಹಿನ್ನೆಲೆಯಲ್ಲಿ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು.

ಎರಡು ದಿನಗಳ ಜಿ 20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸುನಕ್ ಅವರು ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಭಾರತಕ್ಕೆ ಬಂದಿದ್ದಾರೆ.ಕಳೆದ ವರ್ಷ ಅಕ್ಟೋಬರ್‍ ನಲ್ಲಿ ಯುಕೆ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಿಷಿ ಸುನಕ್ ಅವರು ಪ್ರಧಾನಿಯಾಗಿ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ.

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ಕುರಿತು ಅಕ್ಷರಧಾಮ ದೇವಾಲಯದ ನಿರ್ದೇಶಕ ಜ್ಯೋತಿಂದ್ರ ದವೆ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿ, ಅವರ ಅನುಭವ ಅಸಾಧಾರಣವಾಗಿತ್ತು. ಅವರು ಬಹಳ ನಂಬಿಕೆಯಿಂದ ಪೂಜೆ ಮತ್ತು ಆರತಿಯನ್ನು ಮಾಡಿದರು. ನಾವು ಅವರಿಗೆ ದೇವಾಲಯವನ್ನು ತೋರಿಸಿದ್ದೇವೆ. ನಂತರ ದೇವಸ್ಥಾನದ ಮಾದರಿಯನ್ನು ಉಡುಗೊರೆಯಾಗಿ ನೀಡಿದೆವು. ಅವರು ಇಲ್ಲಿ ಪ್ರತಿ ನಿಮಿಷವನ್ನು ಆನಂದಿಸಿದರು. ಅವರ ಪತ್ನಿ ಅಕ್ಷತಾ ಮೂರ್ತಿ ಸಹ ಖುಷಿಪಟ್ಟರು ಎಂದರು.

lokesh

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

4 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

14 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago