BREAKING NEWS

ಪತ್ನಿ ಅಕ್ಷತಾ ಮೂರ್ತಿಯೊಂದಿಗೆ ಅಕ್ಷರಧಾಮ ದೇವಾಲಯಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭೇಟಿ

ನವದೆಹಲಿ : ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಪತ್ನಿ ಅಕ್ಷತಾ ಮೂರ್ತಿಯವರೊಂದಿಗೆ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬ್ರಿಟನ್ ಪ್ರಧಾನಿ ಆದ ಬಳಿಕ ರಿಷಿ ಸುನಾಕ್ ಅವರು ಹಲವು ಬಾರಿ ತಮ್ಮ ಭಾರತೀಯ ಮೂಲದ ಬಗ್ಗೆ ಹೇಳಿಕೊಂಡಿದ್ದಾರೆ. ನಾನು ಒಬ್ಬ ಹೆಮ್ಮೆಯ ಭಾರತೀಯ ಎಂದಿರುವ ರಿಷಿ ಸುನಾಕ್, ನನ್ನ ಪೂರ್ವಜರು ಭಾರತೀಯರು ಎಂದು ಹೇಳಿದ್ದಾರೆ. ಈ ಮೂಲಕ ಭಾರತದ ಜೊತೆಗೆ ಇರುವ ತಮ್ಮ ನಂಟನ್ನು ವಿವರಿಸುತ್ತಾರೆ. ಇದೀಗ ಜಿ – 20 ಶೃಂಗ ಸಭೆಯ ಕಾರ್ಯದೊತ್ತಡದ ನಡುವೆಯೂ ಅಕ್ಷರಧಾಮ ದೇಗುಲಕ್ಕೆ ಭೇಟಿ ನೀಡಿ ತಮ್ಮ ಧಾರ್ಮಿಕ ನಂಬಿಕೆಯನ್ನು ಸಾರಿದ್ದಾರೆ.

ಕಳೆದ ತಿಂಗಳು ತಮ್ಮ ಧಾರ್ಮಿಕ ನಂಬಿಕೆ ಕುರಿತು ಮಾತನಾಡಿದ್ದ ರಿಷಿ ಸುನಾಕ್, ಹಿಂದೂ ಧರ್ಮದ ಆದರ್ಶಗಳು ಹಾಗೂ ತತ್ವಗಳು ನನ್ನ ಜೀವನದ ಹಲವು ಆಯಾಮಗಳಲ್ಲಿ ನೆರವಿಗೆ ಬಂದಿವೆ ಎಂದು ವಿವರಿಸಿದ್ದರು. ಧೈರ್ಯ, ಶಕ್ತಿ ಹಾಗೂ ದೃಢತೆಯನ್ನು ತಂದುಕೊಟ್ಟಿದೆ ಎಂದು ಹೇಳಿದ್ದರು. ಒಂದು ದೇಶದ ನಾಯಕನಾಗಿ ನಾನು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಲು ನೆರವಾಗಿದೆ ಎಂದು ರಿಷಿ ಸುನಾಕ್ ಹೇಳಿದ್ದರು.

ದೇವಾಲಯದಲ್ಲಿ ಪ್ರಾರ್ಥನೆ, ಪೂಜೆ ಸಲ್ಲಿಸಿದ ನಂತರ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು.ಸುನಕ್ ಅವರ ಭೇಟಿಯ ಹಿನ್ನೆಲೆಯಲ್ಲಿ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು.

ಎರಡು ದಿನಗಳ ಜಿ 20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸುನಕ್ ಅವರು ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಭಾರತಕ್ಕೆ ಬಂದಿದ್ದಾರೆ.ಕಳೆದ ವರ್ಷ ಅಕ್ಟೋಬರ್‍ ನಲ್ಲಿ ಯುಕೆ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಿಷಿ ಸುನಕ್ ಅವರು ಪ್ರಧಾನಿಯಾಗಿ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ.

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ಕುರಿತು ಅಕ್ಷರಧಾಮ ದೇವಾಲಯದ ನಿರ್ದೇಶಕ ಜ್ಯೋತಿಂದ್ರ ದವೆ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿ, ಅವರ ಅನುಭವ ಅಸಾಧಾರಣವಾಗಿತ್ತು. ಅವರು ಬಹಳ ನಂಬಿಕೆಯಿಂದ ಪೂಜೆ ಮತ್ತು ಆರತಿಯನ್ನು ಮಾಡಿದರು. ನಾವು ಅವರಿಗೆ ದೇವಾಲಯವನ್ನು ತೋರಿಸಿದ್ದೇವೆ. ನಂತರ ದೇವಸ್ಥಾನದ ಮಾದರಿಯನ್ನು ಉಡುಗೊರೆಯಾಗಿ ನೀಡಿದೆವು. ಅವರು ಇಲ್ಲಿ ಪ್ರತಿ ನಿಮಿಷವನ್ನು ಆನಂದಿಸಿದರು. ಅವರ ಪತ್ನಿ ಅಕ್ಷತಾ ಮೂರ್ತಿ ಸಹ ಖುಷಿಪಟ್ಟರು ಎಂದರು.

lokesh

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

4 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

8 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

9 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

9 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

14 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

14 hours ago