ನವದೆಹಲಿ: ಭಾರತ್ ರಾಷ್ಟ್ರ ಸಮಿತಿ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ, ಎಐಸಿಸಿ ರಾಜ್ಯ ಉಸ್ತುವಾರಿ ಮಾಣಿಕ್ರಾವ್ ಠಾಕ್ರೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು.
ಈ ವರ್ಷಾಂತ್ಯದಲ್ಲಿ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಈ ನಾಯಕರ ಸೇರ್ಪಡೆಯಿಂದಾಗಿ ಕಾಂಗ್ರೆಸ್ಗೆ ಸ್ವಲ್ಪ ಬಲ ಬದಂತಾಗಿದೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರಕ್ಕೆ ತೀವ್ರ ಸವಾಲ್ ಒಡ್ಡಲು ಮತ್ತು ಅದನ್ನು ಅಧಿಕಾರದಿಂದ ಕಿತ್ತೊಗೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…