BREAKING NEWS

ಆಪಾದನೆ ಬಂದಿದೆ ಎದುರಿಸೋಣ: ಪೋಕ್ಸೋ ಪ್ರಕರಣ ಸಂಬಂಧ ಬಿಎಸ್‌ವೈ ಫಸ್ಟ್‌ ರಿಯಾಕ್ಷನ್‌!

ಬೆಂಗಳೂರು: ಮಾಜಿ ಮಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ಮೇಲೆ ಮಹಿಳೆಯೊಬ್ಬಳು ತನ್ನ ಅಪ್ರಾಪ್ತ ಬಾಲಕೀಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪೋಕ್ಸೋ ಅಡಿ ಪ್ರಕರಣ ದಾಖಲಿಸಿದ್ದಾರೆ.

ಈ ಸಂಬಂಧ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದರುವ ಮಾಜಿ ಸಿಎಂ ಬಿಎಸ್‌ವೈ ಯಾರೋ ಒಬ್ಬ ಹೆಣ್ಣು ಮಗಳು ದೂರು ಕೊಟ್ಟಿದ್ದಾಳೆ, ಇರಲಿ ಎದುರಿಸೋಣ ಎಂದು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದರು ಅವರು, ಸುಮಾರು ಒಂದೂವರೆ ತಿಂಗಳ ಹಿಂದಿನಿಂದಲೂ ತಾಯಿ-ಮಗಳು ನಮ್ಮ ಮನೆ ಕಡೆ ನನ್ನನ್ನು ಕಾಣಲು ಬಂದಿದ್ದರು, ನಾನು ಹಲವಾರು ಬಾರಿ ನಿರಾಕರಿಸಿದ್ದೆ. ಒಂದು ದಿನ ಅಳುತ್ತಾ ಮನೆ ಮುಂದೆ ನಿಂತಿದ್ದಾಗ ಕರೆದು ಒಳಗೆ ಕೂರಿಸಿ ಅವರ ಸಮಸ್ಯೆಗಳ ಬಗ್ಗೆ ಆಲಿಸಿದೆ. ಅವರು ನನ್ನ ಬಳಿ ಅವರ ಸಮಸ್ಯೆಗಳನ್ನು ಹೇಳಿಕೊಂಡರು. ನಂತರ ನಾನು ಅವರಿಗೆ ಕಮಿಷನರ್‌ ಭೇಟಿಯಾಗುವಂತೆ ಸೂಚಿಸಿದ್ದೆ ಎಂದರು.

ತುಂಬಾ ಕಷ್ಟದಲ್ಲಿರುವುದಾಗಿ ಹೇಳಿಕೊಂಡಿದ್ದರಿಂದ ಅವರಿಗೆ ಒಂದಷ್ಟು ಹಣದ ಸಹಾಯವನ್ನು ಮಾಡಿ ತಾಯಿ-ಮಗಳನ್ನು ಕಳಿಸಿಕೊಟ್ಟೆ. ಆದರೆ, ಈಗ ನೋಡಿದರೆ ಆಕೆ ನನ್ನ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಇರಲಿ ಇದನ್ನು ಎದುರಿಸೋಣ ಮತ್ತು ಈ ಬಗ್ಗೆ ಈ ಹೆಚ್ಚು ಮಾತನಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಿಳಿಸಿದರು.

andolanait

Recent Posts

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

37 mins ago

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

3 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

3 hours ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

3 hours ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

3 hours ago