ಬೆಂಗಳೂರು: ಮಾಜಿ ಮಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಮಹಿಳೆಯೊಬ್ಬಳು ತನ್ನ ಅಪ್ರಾಪ್ತ ಬಾಲಕೀಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪೋಕ್ಸೋ ಅಡಿ ಪ್ರಕರಣ ದಾಖಲಿಸಿದ್ದಾರೆ.
ಈ ಸಂಬಂಧ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದರುವ ಮಾಜಿ ಸಿಎಂ ಬಿಎಸ್ವೈ ಯಾರೋ ಒಬ್ಬ ಹೆಣ್ಣು ಮಗಳು ದೂರು ಕೊಟ್ಟಿದ್ದಾಳೆ, ಇರಲಿ ಎದುರಿಸೋಣ ಎಂದು ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದರು ಅವರು, ಸುಮಾರು ಒಂದೂವರೆ ತಿಂಗಳ ಹಿಂದಿನಿಂದಲೂ ತಾಯಿ-ಮಗಳು ನಮ್ಮ ಮನೆ ಕಡೆ ನನ್ನನ್ನು ಕಾಣಲು ಬಂದಿದ್ದರು, ನಾನು ಹಲವಾರು ಬಾರಿ ನಿರಾಕರಿಸಿದ್ದೆ. ಒಂದು ದಿನ ಅಳುತ್ತಾ ಮನೆ ಮುಂದೆ ನಿಂತಿದ್ದಾಗ ಕರೆದು ಒಳಗೆ ಕೂರಿಸಿ ಅವರ ಸಮಸ್ಯೆಗಳ ಬಗ್ಗೆ ಆಲಿಸಿದೆ. ಅವರು ನನ್ನ ಬಳಿ ಅವರ ಸಮಸ್ಯೆಗಳನ್ನು ಹೇಳಿಕೊಂಡರು. ನಂತರ ನಾನು ಅವರಿಗೆ ಕಮಿಷನರ್ ಭೇಟಿಯಾಗುವಂತೆ ಸೂಚಿಸಿದ್ದೆ ಎಂದರು.
ತುಂಬಾ ಕಷ್ಟದಲ್ಲಿರುವುದಾಗಿ ಹೇಳಿಕೊಂಡಿದ್ದರಿಂದ ಅವರಿಗೆ ಒಂದಷ್ಟು ಹಣದ ಸಹಾಯವನ್ನು ಮಾಡಿ ತಾಯಿ-ಮಗಳನ್ನು ಕಳಿಸಿಕೊಟ್ಟೆ. ಆದರೆ, ಈಗ ನೋಡಿದರೆ ಆಕೆ ನನ್ನ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಇರಲಿ ಇದನ್ನು ಎದುರಿಸೋಣ ಮತ್ತು ಈ ಬಗ್ಗೆ ಈ ಹೆಚ್ಚು ಮಾತನಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…