BREAKING NEWS

ಆಪಾದನೆ ಬಂದಿದೆ ಎದುರಿಸೋಣ: ಪೋಕ್ಸೋ ಪ್ರಕರಣ ಸಂಬಂಧ ಬಿಎಸ್‌ವೈ ಫಸ್ಟ್‌ ರಿಯಾಕ್ಷನ್‌!

ಬೆಂಗಳೂರು: ಮಾಜಿ ಮಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ಮೇಲೆ ಮಹಿಳೆಯೊಬ್ಬಳು ತನ್ನ ಅಪ್ರಾಪ್ತ ಬಾಲಕೀಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪೋಕ್ಸೋ ಅಡಿ ಪ್ರಕರಣ ದಾಖಲಿಸಿದ್ದಾರೆ.

ಈ ಸಂಬಂಧ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದರುವ ಮಾಜಿ ಸಿಎಂ ಬಿಎಸ್‌ವೈ ಯಾರೋ ಒಬ್ಬ ಹೆಣ್ಣು ಮಗಳು ದೂರು ಕೊಟ್ಟಿದ್ದಾಳೆ, ಇರಲಿ ಎದುರಿಸೋಣ ಎಂದು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದರು ಅವರು, ಸುಮಾರು ಒಂದೂವರೆ ತಿಂಗಳ ಹಿಂದಿನಿಂದಲೂ ತಾಯಿ-ಮಗಳು ನಮ್ಮ ಮನೆ ಕಡೆ ನನ್ನನ್ನು ಕಾಣಲು ಬಂದಿದ್ದರು, ನಾನು ಹಲವಾರು ಬಾರಿ ನಿರಾಕರಿಸಿದ್ದೆ. ಒಂದು ದಿನ ಅಳುತ್ತಾ ಮನೆ ಮುಂದೆ ನಿಂತಿದ್ದಾಗ ಕರೆದು ಒಳಗೆ ಕೂರಿಸಿ ಅವರ ಸಮಸ್ಯೆಗಳ ಬಗ್ಗೆ ಆಲಿಸಿದೆ. ಅವರು ನನ್ನ ಬಳಿ ಅವರ ಸಮಸ್ಯೆಗಳನ್ನು ಹೇಳಿಕೊಂಡರು. ನಂತರ ನಾನು ಅವರಿಗೆ ಕಮಿಷನರ್‌ ಭೇಟಿಯಾಗುವಂತೆ ಸೂಚಿಸಿದ್ದೆ ಎಂದರು.

ತುಂಬಾ ಕಷ್ಟದಲ್ಲಿರುವುದಾಗಿ ಹೇಳಿಕೊಂಡಿದ್ದರಿಂದ ಅವರಿಗೆ ಒಂದಷ್ಟು ಹಣದ ಸಹಾಯವನ್ನು ಮಾಡಿ ತಾಯಿ-ಮಗಳನ್ನು ಕಳಿಸಿಕೊಟ್ಟೆ. ಆದರೆ, ಈಗ ನೋಡಿದರೆ ಆಕೆ ನನ್ನ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಇರಲಿ ಇದನ್ನು ಎದುರಿಸೋಣ ಮತ್ತು ಈ ಬಗ್ಗೆ ಈ ಹೆಚ್ಚು ಮಾತನಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಿಳಿಸಿದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago