ಬೆಂಗಳೂರು: ಮಾಜಿ ಮಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಮಹಿಳೆಯೊಬ್ಬಳು ತನ್ನ ಅಪ್ರಾಪ್ತ ಬಾಲಕೀಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪೋಕ್ಸೋ ಅಡಿ ಪ್ರಕರಣ ದಾಖಲಿಸಿದ್ದಾರೆ.
ಈ ಸಂಬಂಧ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದರುವ ಮಾಜಿ ಸಿಎಂ ಬಿಎಸ್ವೈ ಯಾರೋ ಒಬ್ಬ ಹೆಣ್ಣು ಮಗಳು ದೂರು ಕೊಟ್ಟಿದ್ದಾಳೆ, ಇರಲಿ ಎದುರಿಸೋಣ ಎಂದು ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದರು ಅವರು, ಸುಮಾರು ಒಂದೂವರೆ ತಿಂಗಳ ಹಿಂದಿನಿಂದಲೂ ತಾಯಿ-ಮಗಳು ನಮ್ಮ ಮನೆ ಕಡೆ ನನ್ನನ್ನು ಕಾಣಲು ಬಂದಿದ್ದರು, ನಾನು ಹಲವಾರು ಬಾರಿ ನಿರಾಕರಿಸಿದ್ದೆ. ಒಂದು ದಿನ ಅಳುತ್ತಾ ಮನೆ ಮುಂದೆ ನಿಂತಿದ್ದಾಗ ಕರೆದು ಒಳಗೆ ಕೂರಿಸಿ ಅವರ ಸಮಸ್ಯೆಗಳ ಬಗ್ಗೆ ಆಲಿಸಿದೆ. ಅವರು ನನ್ನ ಬಳಿ ಅವರ ಸಮಸ್ಯೆಗಳನ್ನು ಹೇಳಿಕೊಂಡರು. ನಂತರ ನಾನು ಅವರಿಗೆ ಕಮಿಷನರ್ ಭೇಟಿಯಾಗುವಂತೆ ಸೂಚಿಸಿದ್ದೆ ಎಂದರು.
ತುಂಬಾ ಕಷ್ಟದಲ್ಲಿರುವುದಾಗಿ ಹೇಳಿಕೊಂಡಿದ್ದರಿಂದ ಅವರಿಗೆ ಒಂದಷ್ಟು ಹಣದ ಸಹಾಯವನ್ನು ಮಾಡಿ ತಾಯಿ-ಮಗಳನ್ನು ಕಳಿಸಿಕೊಟ್ಟೆ. ಆದರೆ, ಈಗ ನೋಡಿದರೆ ಆಕೆ ನನ್ನ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಇರಲಿ ಇದನ್ನು ಎದುರಿಸೋಣ ಮತ್ತು ಈ ಬಗ್ಗೆ ಈ ಹೆಚ್ಚು ಮಾತನಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…