BREAKING NEWS

ಆಪಾದನೆ ಬಂದಿದೆ ಎದುರಿಸೋಣ: ಪೋಕ್ಸೋ ಪ್ರಕರಣ ಸಂಬಂಧ ಬಿಎಸ್‌ವೈ ಫಸ್ಟ್‌ ರಿಯಾಕ್ಷನ್‌!

ಬೆಂಗಳೂರು: ಮಾಜಿ ಮಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ಮೇಲೆ ಮಹಿಳೆಯೊಬ್ಬಳು ತನ್ನ ಅಪ್ರಾಪ್ತ ಬಾಲಕೀಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪೋಕ್ಸೋ ಅಡಿ ಪ್ರಕರಣ ದಾಖಲಿಸಿದ್ದಾರೆ.

ಈ ಸಂಬಂಧ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದರುವ ಮಾಜಿ ಸಿಎಂ ಬಿಎಸ್‌ವೈ ಯಾರೋ ಒಬ್ಬ ಹೆಣ್ಣು ಮಗಳು ದೂರು ಕೊಟ್ಟಿದ್ದಾಳೆ, ಇರಲಿ ಎದುರಿಸೋಣ ಎಂದು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದರು ಅವರು, ಸುಮಾರು ಒಂದೂವರೆ ತಿಂಗಳ ಹಿಂದಿನಿಂದಲೂ ತಾಯಿ-ಮಗಳು ನಮ್ಮ ಮನೆ ಕಡೆ ನನ್ನನ್ನು ಕಾಣಲು ಬಂದಿದ್ದರು, ನಾನು ಹಲವಾರು ಬಾರಿ ನಿರಾಕರಿಸಿದ್ದೆ. ಒಂದು ದಿನ ಅಳುತ್ತಾ ಮನೆ ಮುಂದೆ ನಿಂತಿದ್ದಾಗ ಕರೆದು ಒಳಗೆ ಕೂರಿಸಿ ಅವರ ಸಮಸ್ಯೆಗಳ ಬಗ್ಗೆ ಆಲಿಸಿದೆ. ಅವರು ನನ್ನ ಬಳಿ ಅವರ ಸಮಸ್ಯೆಗಳನ್ನು ಹೇಳಿಕೊಂಡರು. ನಂತರ ನಾನು ಅವರಿಗೆ ಕಮಿಷನರ್‌ ಭೇಟಿಯಾಗುವಂತೆ ಸೂಚಿಸಿದ್ದೆ ಎಂದರು.

ತುಂಬಾ ಕಷ್ಟದಲ್ಲಿರುವುದಾಗಿ ಹೇಳಿಕೊಂಡಿದ್ದರಿಂದ ಅವರಿಗೆ ಒಂದಷ್ಟು ಹಣದ ಸಹಾಯವನ್ನು ಮಾಡಿ ತಾಯಿ-ಮಗಳನ್ನು ಕಳಿಸಿಕೊಟ್ಟೆ. ಆದರೆ, ಈಗ ನೋಡಿದರೆ ಆಕೆ ನನ್ನ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಇರಲಿ ಇದನ್ನು ಎದುರಿಸೋಣ ಮತ್ತು ಈ ಬಗ್ಗೆ ಈ ಹೆಚ್ಚು ಮಾತನಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಿಳಿಸಿದರು.

andolanait

Recent Posts

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

23 mins ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

38 mins ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

54 mins ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

1 hour ago

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು…

1 hour ago

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

ಚೆನ್ನೈ: ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂದಿನ ಮಾಸ್ಟರ್‌ ಮೈಂಡ್‌ನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಹಿಂಸಾತ್ಮಕ ಕಾರ್ಮಿಕರ ಪ್ರತಿಭಟನೆಯಲ್ಲಿ ಪ್ರಮುಖ ಆರೋಪಿಗಳನ್ನು…

2 hours ago