ಬೆಂಗಳೂರು: ಮಾಜಿ ಮಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಮಹಿಳೆಯೊಬ್ಬಳು ತನ್ನ ಅಪ್ರಾಪ್ತ ಬಾಲಕೀಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪೋಕ್ಸೋ ಅಡಿ ಪ್ರಕರಣ ದಾಖಲಿಸಿದ್ದಾರೆ.
ಈ ಸಂಬಂಧ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದರುವ ಮಾಜಿ ಸಿಎಂ ಬಿಎಸ್ವೈ ಯಾರೋ ಒಬ್ಬ ಹೆಣ್ಣು ಮಗಳು ದೂರು ಕೊಟ್ಟಿದ್ದಾಳೆ, ಇರಲಿ ಎದುರಿಸೋಣ ಎಂದು ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದರು ಅವರು, ಸುಮಾರು ಒಂದೂವರೆ ತಿಂಗಳ ಹಿಂದಿನಿಂದಲೂ ತಾಯಿ-ಮಗಳು ನಮ್ಮ ಮನೆ ಕಡೆ ನನ್ನನ್ನು ಕಾಣಲು ಬಂದಿದ್ದರು, ನಾನು ಹಲವಾರು ಬಾರಿ ನಿರಾಕರಿಸಿದ್ದೆ. ಒಂದು ದಿನ ಅಳುತ್ತಾ ಮನೆ ಮುಂದೆ ನಿಂತಿದ್ದಾಗ ಕರೆದು ಒಳಗೆ ಕೂರಿಸಿ ಅವರ ಸಮಸ್ಯೆಗಳ ಬಗ್ಗೆ ಆಲಿಸಿದೆ. ಅವರು ನನ್ನ ಬಳಿ ಅವರ ಸಮಸ್ಯೆಗಳನ್ನು ಹೇಳಿಕೊಂಡರು. ನಂತರ ನಾನು ಅವರಿಗೆ ಕಮಿಷನರ್ ಭೇಟಿಯಾಗುವಂತೆ ಸೂಚಿಸಿದ್ದೆ ಎಂದರು.
ತುಂಬಾ ಕಷ್ಟದಲ್ಲಿರುವುದಾಗಿ ಹೇಳಿಕೊಂಡಿದ್ದರಿಂದ ಅವರಿಗೆ ಒಂದಷ್ಟು ಹಣದ ಸಹಾಯವನ್ನು ಮಾಡಿ ತಾಯಿ-ಮಗಳನ್ನು ಕಳಿಸಿಕೊಟ್ಟೆ. ಆದರೆ, ಈಗ ನೋಡಿದರೆ ಆಕೆ ನನ್ನ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಇರಲಿ ಇದನ್ನು ಎದುರಿಸೋಣ ಮತ್ತು ಈ ಬಗ್ಗೆ ಈ ಹೆಚ್ಚು ಮಾತನಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…