BREAKING NEWS

ಪಾಕಿಸ್ತಾನದ ಒಳನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್ ಎಫ್ ಯೋಧರು

ಜಮ್ಮು-ಕಾಶ್ಮೀರ : ಪಾಕಿಸ್ತಾನದ ಒಳನುಸುಳುಕೋರನನ್ನು ನಸುಕಿನ ಜಾವ ಬಿಎಸ್ ಎಫ್ ಯೋಧರು ಹೊಡೆದುರುಳಿಸಿದ್ದಾರೆ.
ಮುಂಜಾನೆ ಸಾಂಬಾ ಸೆಕ್ಟರ್‍ ನಲ್ಲಿರುವ ಅಂತಾರಾಷ್ಟ್ರೀಯ ಗಡಿಯನ್ನು ಪಾಕಿಸ್ತಾನದ ಕಡೆಯಿಂದ ನುಸುಳಲು ಯತ್ನಿಸಿದಾಗ ಘಟನೆ ನಡೆದಿದೆ.
ಜಮ್ಮು-ಕಾಶ್ಮೀರದ ಸಾಂಬಾ ಪ್ರದೇಶದಲ್ಲಿ ಪಾಕಿಸ್ತಾನ ಕಡೆಯಿಂದ ಅಂತಾರಾಷ್ಟ್ರೀಯ ಗಡಿಭಾಗವನ್ನು ನುಸುಳಿ ಶಂಕಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬ ಸಂಚರಿಸುತ್ತಿದ್ದ. ಬಿಎಸ್‍ಎಫ್ ಯೋಧರು ಆತನಿಗೆ ಎಚ್ಚರಿಕೆ ನೀಡಿದರು.
ಆದರೂ ಯೋಧರ ಮಾತನ್ನು ಲಕ್ಷಿಸದೆ ಭಾರತದ ಗಡಿಯೊಳಗೆ ಬೇಲಿ ದಾಟಿ ಮುಂದಕ್ಕೆ ಬರಲಾರಂಭಿಸಿದ. ಆಗ ಭದ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ಯೋಧರು ಆತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಏಪ್ರಿಲ್ 5 ರಂದು ನುಸುಳುಕೋರನನ್ನು ಬಿಎಸ್‍ಎಫ್ ಬಂಧಿಸಿತ್ತು. ಆರೋಪಿ ಗಡಿಯಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿ ದಾಟಿ ಭಾರತ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ. ಗಡಿಯಲ್ಲಿ ಎಚ್ಚರಿಕೆವಹಿಸಿ ಗಸ್ತು ತಿರುಗುತ್ತಿದ್ದ ಬಿಎಸ್‍ಎಫ್ ಸಿಬ್ಬಂದಿ ತಕ್ಷಣ ಆತನನ್ನು ಸೆರೆ ಹಿಡಿದಿದ್ದಾರೆ. ಬಿಒಪಿ ಬಳಿಯ ಗೇಟ್ ನಿಂದ ಕೆಳಗಿಳಿದ ಕೂಡಲೇ ಆತ ಸಿಕ್ಕಿಬಿದ್ದಿದ್ದಾನೆ. ಪಾಕಿಸ್ತಾನದ ನಗರ್‍ ಪರ್ಕರ್‍ ನಿವಾಸಿ ದಯಾರಾಮ್ ಎಂದು ಆತನನ್ನು ಗುರುತಿಸಲಾಗಿದೆ. ಆರೋಪಿಯ ಬಂಧನವನ್ನು ಬಿಎಸ್‍ಎಫ್ ಖಚಿತಪಡಿಸಿದೆ.

lokesh

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

38 mins ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

43 mins ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

45 mins ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

47 mins ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

49 mins ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

13 hours ago