BREAKING NEWS

ಪಾಕಿಸ್ತಾನದ ಒಳನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್ ಎಫ್ ಯೋಧರು

ಜಮ್ಮು-ಕಾಶ್ಮೀರ : ಪಾಕಿಸ್ತಾನದ ಒಳನುಸುಳುಕೋರನನ್ನು ನಸುಕಿನ ಜಾವ ಬಿಎಸ್ ಎಫ್ ಯೋಧರು ಹೊಡೆದುರುಳಿಸಿದ್ದಾರೆ.
ಮುಂಜಾನೆ ಸಾಂಬಾ ಸೆಕ್ಟರ್‍ ನಲ್ಲಿರುವ ಅಂತಾರಾಷ್ಟ್ರೀಯ ಗಡಿಯನ್ನು ಪಾಕಿಸ್ತಾನದ ಕಡೆಯಿಂದ ನುಸುಳಲು ಯತ್ನಿಸಿದಾಗ ಘಟನೆ ನಡೆದಿದೆ.
ಜಮ್ಮು-ಕಾಶ್ಮೀರದ ಸಾಂಬಾ ಪ್ರದೇಶದಲ್ಲಿ ಪಾಕಿಸ್ತಾನ ಕಡೆಯಿಂದ ಅಂತಾರಾಷ್ಟ್ರೀಯ ಗಡಿಭಾಗವನ್ನು ನುಸುಳಿ ಶಂಕಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬ ಸಂಚರಿಸುತ್ತಿದ್ದ. ಬಿಎಸ್‍ಎಫ್ ಯೋಧರು ಆತನಿಗೆ ಎಚ್ಚರಿಕೆ ನೀಡಿದರು.
ಆದರೂ ಯೋಧರ ಮಾತನ್ನು ಲಕ್ಷಿಸದೆ ಭಾರತದ ಗಡಿಯೊಳಗೆ ಬೇಲಿ ದಾಟಿ ಮುಂದಕ್ಕೆ ಬರಲಾರಂಭಿಸಿದ. ಆಗ ಭದ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ಯೋಧರು ಆತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಏಪ್ರಿಲ್ 5 ರಂದು ನುಸುಳುಕೋರನನ್ನು ಬಿಎಸ್‍ಎಫ್ ಬಂಧಿಸಿತ್ತು. ಆರೋಪಿ ಗಡಿಯಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿ ದಾಟಿ ಭಾರತ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ. ಗಡಿಯಲ್ಲಿ ಎಚ್ಚರಿಕೆವಹಿಸಿ ಗಸ್ತು ತಿರುಗುತ್ತಿದ್ದ ಬಿಎಸ್‍ಎಫ್ ಸಿಬ್ಬಂದಿ ತಕ್ಷಣ ಆತನನ್ನು ಸೆರೆ ಹಿಡಿದಿದ್ದಾರೆ. ಬಿಒಪಿ ಬಳಿಯ ಗೇಟ್ ನಿಂದ ಕೆಳಗಿಳಿದ ಕೂಡಲೇ ಆತ ಸಿಕ್ಕಿಬಿದ್ದಿದ್ದಾನೆ. ಪಾಕಿಸ್ತಾನದ ನಗರ್‍ ಪರ್ಕರ್‍ ನಿವಾಸಿ ದಯಾರಾಮ್ ಎಂದು ಆತನನ್ನು ಗುರುತಿಸಲಾಗಿದೆ. ಆರೋಪಿಯ ಬಂಧನವನ್ನು ಬಿಎಸ್‍ಎಫ್ ಖಚಿತಪಡಿಸಿದೆ.

lokesh

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago