BREAKING NEWS

ಪಾಕಿಸ್ತಾನದ ಒಳನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್ ಎಫ್ ಯೋಧರು

ಜಮ್ಮು-ಕಾಶ್ಮೀರ : ಪಾಕಿಸ್ತಾನದ ಒಳನುಸುಳುಕೋರನನ್ನು ನಸುಕಿನ ಜಾವ ಬಿಎಸ್ ಎಫ್ ಯೋಧರು ಹೊಡೆದುರುಳಿಸಿದ್ದಾರೆ.
ಮುಂಜಾನೆ ಸಾಂಬಾ ಸೆಕ್ಟರ್‍ ನಲ್ಲಿರುವ ಅಂತಾರಾಷ್ಟ್ರೀಯ ಗಡಿಯನ್ನು ಪಾಕಿಸ್ತಾನದ ಕಡೆಯಿಂದ ನುಸುಳಲು ಯತ್ನಿಸಿದಾಗ ಘಟನೆ ನಡೆದಿದೆ.
ಜಮ್ಮು-ಕಾಶ್ಮೀರದ ಸಾಂಬಾ ಪ್ರದೇಶದಲ್ಲಿ ಪಾಕಿಸ್ತಾನ ಕಡೆಯಿಂದ ಅಂತಾರಾಷ್ಟ್ರೀಯ ಗಡಿಭಾಗವನ್ನು ನುಸುಳಿ ಶಂಕಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬ ಸಂಚರಿಸುತ್ತಿದ್ದ. ಬಿಎಸ್‍ಎಫ್ ಯೋಧರು ಆತನಿಗೆ ಎಚ್ಚರಿಕೆ ನೀಡಿದರು.
ಆದರೂ ಯೋಧರ ಮಾತನ್ನು ಲಕ್ಷಿಸದೆ ಭಾರತದ ಗಡಿಯೊಳಗೆ ಬೇಲಿ ದಾಟಿ ಮುಂದಕ್ಕೆ ಬರಲಾರಂಭಿಸಿದ. ಆಗ ಭದ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ಯೋಧರು ಆತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಏಪ್ರಿಲ್ 5 ರಂದು ನುಸುಳುಕೋರನನ್ನು ಬಿಎಸ್‍ಎಫ್ ಬಂಧಿಸಿತ್ತು. ಆರೋಪಿ ಗಡಿಯಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿ ದಾಟಿ ಭಾರತ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ. ಗಡಿಯಲ್ಲಿ ಎಚ್ಚರಿಕೆವಹಿಸಿ ಗಸ್ತು ತಿರುಗುತ್ತಿದ್ದ ಬಿಎಸ್‍ಎಫ್ ಸಿಬ್ಬಂದಿ ತಕ್ಷಣ ಆತನನ್ನು ಸೆರೆ ಹಿಡಿದಿದ್ದಾರೆ. ಬಿಒಪಿ ಬಳಿಯ ಗೇಟ್ ನಿಂದ ಕೆಳಗಿಳಿದ ಕೂಡಲೇ ಆತ ಸಿಕ್ಕಿಬಿದ್ದಿದ್ದಾನೆ. ಪಾಕಿಸ್ತಾನದ ನಗರ್‍ ಪರ್ಕರ್‍ ನಿವಾಸಿ ದಯಾರಾಮ್ ಎಂದು ಆತನನ್ನು ಗುರುತಿಸಲಾಗಿದೆ. ಆರೋಪಿಯ ಬಂಧನವನ್ನು ಬಿಎಸ್‍ಎಫ್ ಖಚಿತಪಡಿಸಿದೆ.

lokesh

Recent Posts

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

1 hour ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

15 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

15 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

16 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

16 hours ago