ನವದೆಹಲಿ: ಜಗತ್ತು ಎದುರಿಸುತ್ತಿರುವ ಯುದ್ಧ, ಆರ್ಥಿಕ ಅಸ್ಥಿರತೆ, ಭಯೋತ್ಪಾದನೆ, ಅಸಮಾನತೆ ಸೇರಿದಂತೆ ಹವಾಮಾನ ಬದಲಾವಣೆಯಂತಹ ಸವಾಲುಗಳಿಗೆ ಭಗವಾನ್ ಬುದ್ಧನ ಆಲೋಚನೆಗಳು ಪರಿಹಾರ ಒದಗಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
ಇಲ್ಲಿ ನಡೆದ ಜಾಗತಿಕ ಬೌದ್ಧ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಜನರ ಜತೆಗೆ ರಾಷ್ಟ್ರಗಳು ಸಹ ತಮ್ಮ ಆಸಕ್ತಿಯೊಂದಿಗೆ ಜಾಗತಿಕ ಹಿತಾಸಕ್ತಿಗಳಿಗೆ ಆದ್ಯತೆ ನೀಡುವುದು ಇಂದಿನ ಅಗತ್ಯವಾಗಿದೆ. ಬಡವರು ಹಾಗೂ ಸಂಪನ್ಮೂಲಗಳ ಕೊರತೆ ಹೊಂದಿರುವ ದೇಶಗಳ ಕುರಿತು ಜಗತ್ತು ಯೋಚಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ಭಾರತವು ಬುದ್ಧನು ತೋರಿಸಿದ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಮೋದಿ ಪ್ರತಿಪಾದಿಸಿದರು. ಟರ್ಕಿ ಭೂಕಂಪ ನಂತರ ಸಹಾಯಕ್ಕೆ ದಾವಿಸಿದ್ದನ್ನು ಉಲ್ಲೇಖಿಸಿ, ಪ್ರತಿಯೊಬ್ಬ ಮನುಷ್ಯನ ನೋವನ್ನು ತನ್ನದೇ ಎಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.
ಗುಜರಾತ್ನಲ್ಲಿರುವ ಮೋದಿ ಜನ್ಮಸ್ಥಳ ಮತ್ತು ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಬುದ್ಧನ ವಿಚಾರಗಳನ್ನು ಪ್ರಚಾರ ಮಾಡಲು ಅಲ್ಲಿನ ಸರ್ಕಾರ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮೋದಿ ತಿಳಿಸಿದ್ದಾರೆ.
ಏಪ್ರಿಲ್ 20 ಮತ್ತು 21 ರಂದು ಅಂತರರಾಷ್ಟ್ರೀಯ ಬೌದ್ಧ ಒಕ್ಕೂಟದ ಸಹಯೋಗದೊಂದಿಗೆ ಸಂಸ್ಕೃತಿ ಸಚಿವಾಲಯವು ಶೃಂಗಸಭೆಯನ್ನು ಆಯೋಜಿಸಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…