ಕಲಬುರಗಿ: ರಾಜ್ಯ ಸರ್ಕಾರದ ಬಜೆಟ್ ಅನುದಾನ ಹಾಗೂ ಆದಾಯ ನೋಡಿಕೊಂಡೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಬಗ್ಗೆ ಏನಾದರೂ ಹೇಳ್ತಾ ಹೋಗಲಿ ಆದರೆ ತಾವು ಮಾಡಿ ತೋರಿಸುತ್ತೇವೆ. ಇದಕ್ಕೆ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ್ದ ಆಶಾಶ್ವನೆಗಳನ್ನು ಸಾಕಾರಗೊಳಿಸಿದ್ದೇ ಸಾಕ್ಷಿ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋದಿ ಕೊಡುಗೆ ಏನು?: ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋದಿ ಏನು ಕೊಡುಗೆ ನೀಡಿದ್ದಾರೆ. ಇದ್ದ ಯೋಜನೆಗಳು ಬೇರೆ ಕಡೆ ಹೋಗಿವೆ. ನಾವು ಮಂಜೂರು ಮಾಡಿದ್ದ ರೈಲುಗಳಿಗೆ ಬಣ್ಣ ಬಳೆದು ಹೊಸ ರೈಲು ಬಿಟ್ಟಿದ್ದಾರೆ. ಕೆಲವರಿಗೆ ಪ್ರಚಾರಬೇಕು. ಪ್ರಚಾರದಿಂದಲೇ ಎಲ್ಲ ಸಿಗುತ್ತೇ ಅಂದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವೂ ತಿಳಿಯುತ್ತದೆ ಎಂದರು.
ಚುನಾವಣೆ ವಾರ್ ಇದ್ದಂತೆ, ಅವರು ಹಂಗ್ ಅಂದ್ರು, ಇವರು ಹಿಂಗ್ ಅಂದ್ರು ಅಂತ ಅಳುತ್ತಾ ಕೂತ್ಕುಕೊಳ್ಳದಲ್ಲ. ಮುಂಜಾನೆಯಿಂದ ಸಂಜೆವರೆಗೆ ಅಳುತ್ತಾ ಕೂರೋದು ಪ್ರಧಾನಿ ಕೆಲಸನಾ? ಎಂದು ಖರ್ಗೆ ಖಾರವಾಗಿ ಪ್ರಶ್ನಿಸಿದರು.
ಜನ ಭಾವನಾತ್ಮಕ ಬಲಿ ಬಿದ್ರೆ ಯಾವ ರಾಜ್ಯವು ಅಭಿವೃದ್ಧಿಯಾಗಲ್ಲ. ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನೇ ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ. ಜನ ಅರಿತುಕೊಳ್ಳುವುದು ಮುಖ್ಯವಾಗಿದೆ ಎಂದು ಖರ್ಗೆ ಹೇಳಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…