ಕಲಬುರಗಿ: ರಾಜ್ಯ ಸರ್ಕಾರದ ಬಜೆಟ್ ಅನುದಾನ ಹಾಗೂ ಆದಾಯ ನೋಡಿಕೊಂಡೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಬಗ್ಗೆ ಏನಾದರೂ ಹೇಳ್ತಾ ಹೋಗಲಿ ಆದರೆ ತಾವು ಮಾಡಿ ತೋರಿಸುತ್ತೇವೆ. ಇದಕ್ಕೆ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ್ದ ಆಶಾಶ್ವನೆಗಳನ್ನು ಸಾಕಾರಗೊಳಿಸಿದ್ದೇ ಸಾಕ್ಷಿ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋದಿ ಕೊಡುಗೆ ಏನು?: ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋದಿ ಏನು ಕೊಡುಗೆ ನೀಡಿದ್ದಾರೆ. ಇದ್ದ ಯೋಜನೆಗಳು ಬೇರೆ ಕಡೆ ಹೋಗಿವೆ. ನಾವು ಮಂಜೂರು ಮಾಡಿದ್ದ ರೈಲುಗಳಿಗೆ ಬಣ್ಣ ಬಳೆದು ಹೊಸ ರೈಲು ಬಿಟ್ಟಿದ್ದಾರೆ. ಕೆಲವರಿಗೆ ಪ್ರಚಾರಬೇಕು. ಪ್ರಚಾರದಿಂದಲೇ ಎಲ್ಲ ಸಿಗುತ್ತೇ ಅಂದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವೂ ತಿಳಿಯುತ್ತದೆ ಎಂದರು.
ಚುನಾವಣೆ ವಾರ್ ಇದ್ದಂತೆ, ಅವರು ಹಂಗ್ ಅಂದ್ರು, ಇವರು ಹಿಂಗ್ ಅಂದ್ರು ಅಂತ ಅಳುತ್ತಾ ಕೂತ್ಕುಕೊಳ್ಳದಲ್ಲ. ಮುಂಜಾನೆಯಿಂದ ಸಂಜೆವರೆಗೆ ಅಳುತ್ತಾ ಕೂರೋದು ಪ್ರಧಾನಿ ಕೆಲಸನಾ? ಎಂದು ಖರ್ಗೆ ಖಾರವಾಗಿ ಪ್ರಶ್ನಿಸಿದರು.
ಜನ ಭಾವನಾತ್ಮಕ ಬಲಿ ಬಿದ್ರೆ ಯಾವ ರಾಜ್ಯವು ಅಭಿವೃದ್ಧಿಯಾಗಲ್ಲ. ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನೇ ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ. ಜನ ಅರಿತುಕೊಳ್ಳುವುದು ಮುಖ್ಯವಾಗಿದೆ ಎಂದು ಖರ್ಗೆ ಹೇಳಿದರು.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…