BREAKING NEWS

ಕಂದಕಕ್ಕೆ ಉರುಳಿದ ಬಸ್ : 7 ಮಂದಿ ದುರ್ಮರಣ

ಡೆಹ್ರಾಡೂನ್ : ಹರಿಯಾಣದಿಂದ ಬರುತ್ತಿದ್ದ ಬಸ್ ನೈನಿತಾಲ್ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿದ ಪರಿಣಾಮ ಐವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 26 ಜನರನ್ನು ರಕ್ಷಿಸಲಾಗಿದ್ದು, ಹೆಚ್ಚಿನ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಸಿವಿಲ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ನೈನಿತಾಲ್‌ನ ವಿಪತ್ತು ನಿಯಂತ್ರಣಾ ಕೊಠಡಿ ಭಾನುವಾರ 30 ರಿಂದ 33 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಾಲಾಧುಂಗಿ ರಸ್ತೆಯ ನಲ್ನಿಯಲ್ಲಿ ಕಂದಕಕ್ಕೆ ಉರುಳಿದೆ ಎಂದು ಎಸ್‌ಡಿಆರ್‌ಎಫ್‌ಗೆ ಮಾಹಿತಿ ನೀಡಿದೆ. ಈ ಮಾಹಿತಿಯ ಮೇರೆಗೆ ಕಮಾಂಡೆಂಟ್ ಎಸ್‌ಡಿಆರ್‌ಎಫ್ ಮಣಿಕಾಂತ್ ಮಿಶ್ರಾ ಅವರ ಸೂಚನೆಯಂತೆ ಪೋಸ್ಟ್ ರುದ್ರಪುರ, ನೈನಿತಾಲ್ ಮತ್ತು ಖೈರ್ನಾದಿಂದ ಎಸ್‌ಡಿಆರ್‌ಎಫ್ ರಕ್ಷಣಾ ತಂಡಗಳು ರಕ್ಷಣೆಗಾಗಿ ಸ್ಥಳಕ್ಕೆ ತೆರಳಿದೆ.

ಬಸ್ ನಿಯಂತ್ರಣ ತಪ್ಪಿ ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಸ್‌ಡಿಆರ್‌ಎಫ್ ರಕ್ಷಣಾ ತಂಡವು ಸ್ಥಳಕ್ಕೆ ಆಗಮಿಸಿ ಎನ್‌ಡಿಆರ್‌ಎಫ್, ಸ್ಥಳೀಯ ಪೊಲೀಸರು ಮತ್ತು ಇತರ ರಕ್ಷಣಾ ಘಟಕಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಬಸ್ಸಿನಲ್ಲಿದ್ದ 26 ಮಂದಿ ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

lokesh

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

23 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago