ಚಾಮರಾಜನಗರ : ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಯಾಗಿದೆ. ಇದೀಗ ಚಾಮರಾಜನಗರದಲ್ಲಿ ರಶ್ ಆಗಿ ಪ್ರಯಾಣಿಕರು ಬಸ್ಸಿನ ಬಾಗಿಲನ್ನೇ ಮುರಿದು ಹಾಕಿದ ಘಟನೆ ನಡೆದಿದೆ.
ಸೋಮವಾರ ಅಮವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಮಲೆ ಮಹದೇಶ್ವರ ಬೆಟ್ಟದ ದರ್ಶನಕ್ಕೆ ಹೊರಟಿದ್ದರು. ಈ ವೇಳೆ ಬಂದ ಬಸ್ ಏರಲು ನೂಕು ನುಗ್ಗಲು ಉಂಟಾಗಿದೆ. ಅಲ್ಲದೇ ಪ್ರಯಾಣಿಕರು ಬಸ್ ಏರುವಾಗ ಡೋರ್ ಮುರಿದು ಹೋಗಿದೆ. ಇದರಿಂದಾಗಿ ಕಂಡಕ್ಟರ್ ಪರದಾಡಿದ್ದಾರೆ. ಅದರಲ್ಲೂ ವಾರದ ಹಿಂದಷ್ಟೆ ಸಾರಿಗೆ ನಿಗಮ ಬಾಗಿಲು ಹಾಕದೇ ಬಸ್ ಓಡಿಸದಂತೆ ಆದೇಶ ನಿಡಿತ್ತು.
ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಪರಿಣಾಮ ಯಾತ್ರಾ ಸ್ಥಳಗಳಿಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಅದೇ ರೀತಿ ಮಲೆ ಮಹದೇಶ್ವರ ದರ್ಶನಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇದರಿಂದಾಗಿ ಕೆಎಸ್ಆರ್ಟಿಸಿ ಬಸ್ಗಳು ತುಂಬಿ ತುಳುಕುತ್ತಿವೆ. ಕೊಳ್ಳೇಗಾಲದ ಬಸ್ ನಿಲ್ದಾಣದಲ್ಲಿ ಮಹದೇಶ್ವರ ಬೆಟ್ಟಕ್ಕೆ ಹೋಗುವ ಬಸ್ ಹತ್ತಲು ಪ್ರಯಾಣಿಕರು ಪರದಾಡುವಂತಾಗಿದೆ.
ಬೆಳಗ್ಗೆಯಿಂದ ಕಾದರೂ ಕೆಲವರಿಗೆ ರಷ್ನಿಂದ ಬಸ್ ಹತ್ತಲು ಆಗಿರಲಿಲ್ಲ. ನಿಲ್ದಾಣದಲ್ಲೇ ಕಾದು ನಿಲ್ಲುವಂತಾಗಿದೆ ಎಂದು ಕೆಲವರು ಗೋಳಾಡಿದ್ದಾರೆ. ಬಸ್ಗಳಲ್ಲಿ ಮಹಿಳೆಯರೇ ತುಂಬಿಕೊಳ್ಳುತ್ತಿದ್ದಾರೆ. ನಾವು ಹೇಗೆ ಹೋಗೋದು ಎಂದು ಪುರುಷರು ಅಳಲು ತೋಡಿಕೊಂಡಿದ್ದಾರೆ.
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…