BREAKING NEWS

ಬಸ್ ಟಿಕೆಟ್ ಎಫೆಕ್ಟ್ : ಚಾಮರಾಜನಗರದಲ್ಲಿ ಬಸ್ ಡೋರ್ ಮುರಿದ ಮಹಿಳೆಯರು!

ಚಾಮರಾಜನಗರ : ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಯಾಗಿದೆ. ಇದೀಗ ಚಾಮರಾಜನಗರದಲ್ಲಿ ರಶ್ ಆಗಿ ಪ್ರಯಾಣಿಕರು ಬಸ್ಸಿನ ಬಾಗಿಲನ್ನೇ ಮುರಿದು ಹಾಕಿದ ಘಟನೆ ನಡೆದಿದೆ.

ಸೋಮವಾರ ಅಮವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಮಲೆ ಮಹದೇಶ್ವರ ಬೆಟ್ಟದ ದರ್ಶನಕ್ಕೆ ಹೊರಟಿದ್ದರು. ಈ ವೇಳೆ ಬಂದ ಬಸ್ ಏರಲು ನೂಕು ನುಗ್ಗಲು ಉಂಟಾಗಿದೆ. ಅಲ್ಲದೇ ಪ್ರಯಾಣಿಕರು ಬಸ್ ಏರುವಾಗ ಡೋರ್ ಮುರಿದು ಹೋಗಿದೆ. ಇದರಿಂದಾಗಿ ಕಂಡಕ್ಟರ್ ಪರದಾಡಿದ್ದಾರೆ. ಅದರಲ್ಲೂ ವಾರದ ಹಿಂದಷ್ಟೆ ಸಾರಿಗೆ ನಿಗಮ ಬಾಗಿಲು ಹಾಕದೇ ಬಸ್ ಓಡಿಸದಂತೆ ಆದೇಶ ನಿಡಿತ್ತು.

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಪರಿಣಾಮ ಯಾತ್ರಾ ಸ್ಥಳಗಳಿಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಅದೇ ರೀತಿ ಮಲೆ ಮಹದೇಶ್ವರ ದರ್ಶನಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇದರಿಂದಾಗಿ ಕೆಎಸ್‍ಆರ್‌ಟಿಸಿ ಬಸ್‍ಗಳು ತುಂಬಿ ತುಳುಕುತ್ತಿವೆ. ಕೊಳ್ಳೇಗಾಲದ ಬಸ್ ನಿಲ್ದಾಣದಲ್ಲಿ ಮಹದೇಶ್ವರ ಬೆಟ್ಟಕ್ಕೆ ಹೋಗುವ ಬಸ್ ಹತ್ತಲು ಪ್ರಯಾಣಿಕರು ಪರದಾಡುವಂತಾಗಿದೆ.

ಬೆಳಗ್ಗೆಯಿಂದ ಕಾದರೂ ಕೆಲವರಿಗೆ ರಷ್‍ನಿಂದ ಬಸ್ ಹತ್ತಲು ಆಗಿರಲಿಲ್ಲ. ನಿಲ್ದಾಣದಲ್ಲೇ ಕಾದು ನಿಲ್ಲುವಂತಾಗಿದೆ ಎಂದು ಕೆಲವರು ಗೋಳಾಡಿದ್ದಾರೆ. ಬಸ್‍ಗಳಲ್ಲಿ ಮಹಿಳೆಯರೇ ತುಂಬಿಕೊಳ್ಳುತ್ತಿದ್ದಾರೆ. ನಾವು ಹೇಗೆ ಹೋಗೋದು ಎಂದು ಪುರುಷರು ಅಳಲು ತೋಡಿಕೊಂಡಿದ್ದಾರೆ.

lokesh

Recent Posts

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

16 mins ago

ಆರ್‌ಬಿಐ ರೆಪೊ ದರ ಯಥಾಸ್ಥಿತಿ : ಹಣಕಾಸು ಸಮಿತಿ ನಿರ್ಣಯ

ಹೊಸದಿಲ್ಲಿ : ಕಳೆದ ಡಿಸೆಂಬರ್‌ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…

43 mins ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್‌ಸಿ…

2 hours ago

ನಟ, ರಾಜಕಾರಣಿ ವಿಜಯ್‌ಗೆ 1.5ಕೋಟಿ ದಂಡ : ರಿಟ್‌ ಅರ್ಜಿ ವಜಾಗೊಳಿಸಿದ ಹೈ ಕೋರ್ಟ್‌

ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…

2 hours ago

ಡ್ರಗ್ಸ್‌ ಸಮೇತ ಸಿಕ್ಕಿಬಿದ್ದ ನಟಿ ಅಂಜುಕೃಷ್ಣ : 8 ಮಂದಿ ಬಂಧನ

ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…

2 hours ago

ಪರೀಕ್ಷಾ ಪೇ ಚರ್ಚಾ | ಇಂಟರ್‌ನೆಟ್‌ನಲ್ಲಿ ಸಮಯ ಕಳೆಯಬೇಡಿ : ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಸಲಹೆ

ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್‍ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…

3 hours ago