BREAKING NEWS

ಬಸ್ ಟಿಕೆಟ್ ಎಫೆಕ್ಟ್ : ಚಾಮರಾಜನಗರದಲ್ಲಿ ಬಸ್ ಡೋರ್ ಮುರಿದ ಮಹಿಳೆಯರು!

ಚಾಮರಾಜನಗರ : ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಯಾಗಿದೆ. ಇದೀಗ ಚಾಮರಾಜನಗರದಲ್ಲಿ ರಶ್ ಆಗಿ ಪ್ರಯಾಣಿಕರು ಬಸ್ಸಿನ ಬಾಗಿಲನ್ನೇ ಮುರಿದು ಹಾಕಿದ ಘಟನೆ ನಡೆದಿದೆ.

ಸೋಮವಾರ ಅಮವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಮಲೆ ಮಹದೇಶ್ವರ ಬೆಟ್ಟದ ದರ್ಶನಕ್ಕೆ ಹೊರಟಿದ್ದರು. ಈ ವೇಳೆ ಬಂದ ಬಸ್ ಏರಲು ನೂಕು ನುಗ್ಗಲು ಉಂಟಾಗಿದೆ. ಅಲ್ಲದೇ ಪ್ರಯಾಣಿಕರು ಬಸ್ ಏರುವಾಗ ಡೋರ್ ಮುರಿದು ಹೋಗಿದೆ. ಇದರಿಂದಾಗಿ ಕಂಡಕ್ಟರ್ ಪರದಾಡಿದ್ದಾರೆ. ಅದರಲ್ಲೂ ವಾರದ ಹಿಂದಷ್ಟೆ ಸಾರಿಗೆ ನಿಗಮ ಬಾಗಿಲು ಹಾಕದೇ ಬಸ್ ಓಡಿಸದಂತೆ ಆದೇಶ ನಿಡಿತ್ತು.

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಪರಿಣಾಮ ಯಾತ್ರಾ ಸ್ಥಳಗಳಿಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಅದೇ ರೀತಿ ಮಲೆ ಮಹದೇಶ್ವರ ದರ್ಶನಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇದರಿಂದಾಗಿ ಕೆಎಸ್‍ಆರ್‌ಟಿಸಿ ಬಸ್‍ಗಳು ತುಂಬಿ ತುಳುಕುತ್ತಿವೆ. ಕೊಳ್ಳೇಗಾಲದ ಬಸ್ ನಿಲ್ದಾಣದಲ್ಲಿ ಮಹದೇಶ್ವರ ಬೆಟ್ಟಕ್ಕೆ ಹೋಗುವ ಬಸ್ ಹತ್ತಲು ಪ್ರಯಾಣಿಕರು ಪರದಾಡುವಂತಾಗಿದೆ.

ಬೆಳಗ್ಗೆಯಿಂದ ಕಾದರೂ ಕೆಲವರಿಗೆ ರಷ್‍ನಿಂದ ಬಸ್ ಹತ್ತಲು ಆಗಿರಲಿಲ್ಲ. ನಿಲ್ದಾಣದಲ್ಲೇ ಕಾದು ನಿಲ್ಲುವಂತಾಗಿದೆ ಎಂದು ಕೆಲವರು ಗೋಳಾಡಿದ್ದಾರೆ. ಬಸ್‍ಗಳಲ್ಲಿ ಮಹಿಳೆಯರೇ ತುಂಬಿಕೊಳ್ಳುತ್ತಿದ್ದಾರೆ. ನಾವು ಹೇಗೆ ಹೋಗೋದು ಎಂದು ಪುರುಷರು ಅಳಲು ತೋಡಿಕೊಂಡಿದ್ದಾರೆ.

lokesh

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago