BREAKING NEWS

ಬಸ್ ಟಿಕೆಟ್ ಎಫೆಕ್ಟ್ : ಚಾಮರಾಜನಗರದಲ್ಲಿ ಬಸ್ ಡೋರ್ ಮುರಿದ ಮಹಿಳೆಯರು!

ಚಾಮರಾಜನಗರ : ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಯಾಗಿದೆ. ಇದೀಗ ಚಾಮರಾಜನಗರದಲ್ಲಿ ರಶ್ ಆಗಿ ಪ್ರಯಾಣಿಕರು ಬಸ್ಸಿನ ಬಾಗಿಲನ್ನೇ ಮುರಿದು ಹಾಕಿದ ಘಟನೆ ನಡೆದಿದೆ.

ಸೋಮವಾರ ಅಮವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಮಲೆ ಮಹದೇಶ್ವರ ಬೆಟ್ಟದ ದರ್ಶನಕ್ಕೆ ಹೊರಟಿದ್ದರು. ಈ ವೇಳೆ ಬಂದ ಬಸ್ ಏರಲು ನೂಕು ನುಗ್ಗಲು ಉಂಟಾಗಿದೆ. ಅಲ್ಲದೇ ಪ್ರಯಾಣಿಕರು ಬಸ್ ಏರುವಾಗ ಡೋರ್ ಮುರಿದು ಹೋಗಿದೆ. ಇದರಿಂದಾಗಿ ಕಂಡಕ್ಟರ್ ಪರದಾಡಿದ್ದಾರೆ. ಅದರಲ್ಲೂ ವಾರದ ಹಿಂದಷ್ಟೆ ಸಾರಿಗೆ ನಿಗಮ ಬಾಗಿಲು ಹಾಕದೇ ಬಸ್ ಓಡಿಸದಂತೆ ಆದೇಶ ನಿಡಿತ್ತು.

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಪರಿಣಾಮ ಯಾತ್ರಾ ಸ್ಥಳಗಳಿಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಅದೇ ರೀತಿ ಮಲೆ ಮಹದೇಶ್ವರ ದರ್ಶನಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇದರಿಂದಾಗಿ ಕೆಎಸ್‍ಆರ್‌ಟಿಸಿ ಬಸ್‍ಗಳು ತುಂಬಿ ತುಳುಕುತ್ತಿವೆ. ಕೊಳ್ಳೇಗಾಲದ ಬಸ್ ನಿಲ್ದಾಣದಲ್ಲಿ ಮಹದೇಶ್ವರ ಬೆಟ್ಟಕ್ಕೆ ಹೋಗುವ ಬಸ್ ಹತ್ತಲು ಪ್ರಯಾಣಿಕರು ಪರದಾಡುವಂತಾಗಿದೆ.

ಬೆಳಗ್ಗೆಯಿಂದ ಕಾದರೂ ಕೆಲವರಿಗೆ ರಷ್‍ನಿಂದ ಬಸ್ ಹತ್ತಲು ಆಗಿರಲಿಲ್ಲ. ನಿಲ್ದಾಣದಲ್ಲೇ ಕಾದು ನಿಲ್ಲುವಂತಾಗಿದೆ ಎಂದು ಕೆಲವರು ಗೋಳಾಡಿದ್ದಾರೆ. ಬಸ್‍ಗಳಲ್ಲಿ ಮಹಿಳೆಯರೇ ತುಂಬಿಕೊಳ್ಳುತ್ತಿದ್ದಾರೆ. ನಾವು ಹೇಗೆ ಹೋಗೋದು ಎಂದು ಪುರುಷರು ಅಳಲು ತೋಡಿಕೊಂಡಿದ್ದಾರೆ.

lokesh

Recent Posts

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

54 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

1 hour ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

2 hours ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

2 hours ago

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

13 hours ago