BREAKING NEWS

ಸಾವಿರಾರು ಮಂದಿ ಇಡ್ಲಿ ಪ್ರಿಯರನ್ನು ಅಗಲಿದ ಬೆಣ್ಣೆ ಇಡ್ಲಿ ಖ್ಯಾತಿಯ ಶಿವಪ್ಪ

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಗ್ರಾಮದ ಬೆಣ್ಣೆ ಇಡ್ಲಿಗೆ ಖ್ಯಾತಿಯಾಗಿದ್ದ ಶಿವಪ್ಪ ಅವರು ಇಂದು ನಿಧನರಾಗಿದ್ದಾರೆ.


ಶಿವಪ್ಪ ಅವರು ತಮ್ಮ ಸ್ಕೂಟರ್‌ ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದು ಸ್ಕೂಟರ್‌ ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆತರಲಾಗಿತ್ತು.
ಆದರೆ ನೆನ್ನೆ ರಾತ್ರಿ ತೀವ್ರ ನೋವಿನಿಂದ ನರಳುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗಮಧ್ಯೆ  ಸಾವಿಗೀಡಾಗಿದ್ದಾರೆ.
ಮೃತರು ಪತ್ನಿ, ಪುತ್ರ ಸೇರಿದಂತೆ ಸಾವಿರಾರು ಮಂದಿ ಇಡ್ಲಿ ಪ್ರಿಯರನ್ನು ಅಗಲಿದ್ದಾರೆ, ಇವರ ಅಂತ್ಯಕ್ರಿಯೆಯು ಸ್ವಗ್ರಾಮ ದರಸಗುಪ್ಪೆಯಲ್ಲಿ ನಡೆಯಲಿದೆ.
ಶಿವಪ್ಪ ಅವರು ಕಳೆದ 30 ವರ್ಷಗಳಿಂದ ತಮ್ಮ ಮನೆಯ ಪಕ್ಕದಲ್ಲೇ ಹೋಟೆಲ್ ನಡೆಸುತ್ತಿದ್ದರು.  ಆರು ಇಡ್ಲಿ, ಬೆಣ್ಣೆ ಮತ್ತು ಚಟ್ನಿ ಒಳಗೊಂಡಿರುವ ಪ್ರತಿ ಪ್ಲೇಟ್‌ಗೆ ₹ 40 ಪಡೆದುಕೊಳ್ಳುತ್ತಿದ್ದರು. ರಾಮನಗರ ಮೂಲದವರಾದ ಶಿವಪ್ಪ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ದರಸಗುಪ್ಪೆ ಗ್ರಾಮದಲ್ಲಿ ನೆಲೆಸಿದ್ದ ಇವರು ಚಾಮರಾಜನಗರ ಬೀದರ್ ರಾಷ್ಟ್ರೀಯ ಹೆದ್ದಾರಿ ಬಾಜುವಿನಲ್ಲಿದ್ದ ತಮ್ಮ ಮನೆಯಲ್ಲಿಯೇ ಜೀವನೋಪಾಯಕ್ಕೆ ಸಣ್ಣ ಟೀ ಅಂಗಡಿ ಪ್ರಾರಂಭಿಸಿದರು. ಶುಚಿ ಮತ್ತು ರುಚಿಗೆ ಖ್ಯಾತರಾಗಿದ್ದ ಶಿವಪ್ಪ ಅವರ ಹೋಟೆಲ್‍ನಲ್ಲಿ ಟೀ ಕುಡಿಯಲು ಜನ ತಂಡ ತಂಡವಾಗಿ ಆಗಮಿಸುತ್ತಿದ್ದರು. ನಂತರ ಸಣ್ಣದಾಗಿ ಬೆಳಗಿನ ಉಪಹಾರ ಇಡ್ಲಿ ಮಾರಲು ಪ್ರಾರಂಭಿಸಿದರು. ನೋಡ ನೋಡುತ್ತಿದ್ದಂತೆಯೇ ಅವರ ಇಡ್ಲಿ ಬೆಣ್ಣೆ ಇಡ್ಲಿ ಎಂದೇ ಜನಪ್ರಿಯವಾಯಿತು. ಇವರು ಮಾಡುವ ಇಡ್ಲಿಗೆ ಜನರು ಗಂಟೆ ಗಟ್ಟಲೇ ಕಾಯುವಂತಾಗಿತ್ತು.

ಶ್ರೀರಂಗಪಟ್ಟಣ-ಬೀದರ್ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಈ ಪುಟ್ಟ ಹೋಟೆಲ್ ದಕ್ಷಿಣ ಭಾರತದಲ್ಲಿ ಹೆಸರು ವಾಸಿಯಾಗಿತ್ತು. ಹೋಟೆಲ್‍ಗೆ ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯ ಪ್ರವಾಸಿಗರು ಇಡ್ಲಿ ತಿನ್ನಲು ಆಗಮಿಸುತ್ತಿದ್ದರು. ನಟರಾದ ಪ್ರಕಾಶ್ ರೈ ಹಾಗೂ ಸಿಹಿಕಹಿ ಚಂದ್ರು ಅವರು ತಮ್ಮ ಕಾರ್ಯಕ್ರಮಕ್ಕಾಗಿ ಆಗಮಿಸಿ ಇವರ ಇಡ್ಲಿ ಸವಿದು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಪುಟ್ಟ ಹೋಟೆಲ್, ಮೈಸೂರುಸಿಟಿಯಿಂದ ಕೇವಲ 30ಕಿಮೀ ದೂರದಲ್ಲಿದೆ.

andolanait

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

1 hour ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

6 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

6 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

7 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

7 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

8 hours ago