BREAKING NEWS

ಸಾವಿರಾರು ಮಂದಿ ಇಡ್ಲಿ ಪ್ರಿಯರನ್ನು ಅಗಲಿದ ಬೆಣ್ಣೆ ಇಡ್ಲಿ ಖ್ಯಾತಿಯ ಶಿವಪ್ಪ

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಗ್ರಾಮದ ಬೆಣ್ಣೆ ಇಡ್ಲಿಗೆ ಖ್ಯಾತಿಯಾಗಿದ್ದ ಶಿವಪ್ಪ ಅವರು ಇಂದು ನಿಧನರಾಗಿದ್ದಾರೆ.


ಶಿವಪ್ಪ ಅವರು ತಮ್ಮ ಸ್ಕೂಟರ್‌ ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದು ಸ್ಕೂಟರ್‌ ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆತರಲಾಗಿತ್ತು.
ಆದರೆ ನೆನ್ನೆ ರಾತ್ರಿ ತೀವ್ರ ನೋವಿನಿಂದ ನರಳುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗಮಧ್ಯೆ  ಸಾವಿಗೀಡಾಗಿದ್ದಾರೆ.
ಮೃತರು ಪತ್ನಿ, ಪುತ್ರ ಸೇರಿದಂತೆ ಸಾವಿರಾರು ಮಂದಿ ಇಡ್ಲಿ ಪ್ರಿಯರನ್ನು ಅಗಲಿದ್ದಾರೆ, ಇವರ ಅಂತ್ಯಕ್ರಿಯೆಯು ಸ್ವಗ್ರಾಮ ದರಸಗುಪ್ಪೆಯಲ್ಲಿ ನಡೆಯಲಿದೆ.
ಶಿವಪ್ಪ ಅವರು ಕಳೆದ 30 ವರ್ಷಗಳಿಂದ ತಮ್ಮ ಮನೆಯ ಪಕ್ಕದಲ್ಲೇ ಹೋಟೆಲ್ ನಡೆಸುತ್ತಿದ್ದರು.  ಆರು ಇಡ್ಲಿ, ಬೆಣ್ಣೆ ಮತ್ತು ಚಟ್ನಿ ಒಳಗೊಂಡಿರುವ ಪ್ರತಿ ಪ್ಲೇಟ್‌ಗೆ ₹ 40 ಪಡೆದುಕೊಳ್ಳುತ್ತಿದ್ದರು. ರಾಮನಗರ ಮೂಲದವರಾದ ಶಿವಪ್ಪ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ದರಸಗುಪ್ಪೆ ಗ್ರಾಮದಲ್ಲಿ ನೆಲೆಸಿದ್ದ ಇವರು ಚಾಮರಾಜನಗರ ಬೀದರ್ ರಾಷ್ಟ್ರೀಯ ಹೆದ್ದಾರಿ ಬಾಜುವಿನಲ್ಲಿದ್ದ ತಮ್ಮ ಮನೆಯಲ್ಲಿಯೇ ಜೀವನೋಪಾಯಕ್ಕೆ ಸಣ್ಣ ಟೀ ಅಂಗಡಿ ಪ್ರಾರಂಭಿಸಿದರು. ಶುಚಿ ಮತ್ತು ರುಚಿಗೆ ಖ್ಯಾತರಾಗಿದ್ದ ಶಿವಪ್ಪ ಅವರ ಹೋಟೆಲ್‍ನಲ್ಲಿ ಟೀ ಕುಡಿಯಲು ಜನ ತಂಡ ತಂಡವಾಗಿ ಆಗಮಿಸುತ್ತಿದ್ದರು. ನಂತರ ಸಣ್ಣದಾಗಿ ಬೆಳಗಿನ ಉಪಹಾರ ಇಡ್ಲಿ ಮಾರಲು ಪ್ರಾರಂಭಿಸಿದರು. ನೋಡ ನೋಡುತ್ತಿದ್ದಂತೆಯೇ ಅವರ ಇಡ್ಲಿ ಬೆಣ್ಣೆ ಇಡ್ಲಿ ಎಂದೇ ಜನಪ್ರಿಯವಾಯಿತು. ಇವರು ಮಾಡುವ ಇಡ್ಲಿಗೆ ಜನರು ಗಂಟೆ ಗಟ್ಟಲೇ ಕಾಯುವಂತಾಗಿತ್ತು.

ಶ್ರೀರಂಗಪಟ್ಟಣ-ಬೀದರ್ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಈ ಪುಟ್ಟ ಹೋಟೆಲ್ ದಕ್ಷಿಣ ಭಾರತದಲ್ಲಿ ಹೆಸರು ವಾಸಿಯಾಗಿತ್ತು. ಹೋಟೆಲ್‍ಗೆ ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯ ಪ್ರವಾಸಿಗರು ಇಡ್ಲಿ ತಿನ್ನಲು ಆಗಮಿಸುತ್ತಿದ್ದರು. ನಟರಾದ ಪ್ರಕಾಶ್ ರೈ ಹಾಗೂ ಸಿಹಿಕಹಿ ಚಂದ್ರು ಅವರು ತಮ್ಮ ಕಾರ್ಯಕ್ರಮಕ್ಕಾಗಿ ಆಗಮಿಸಿ ಇವರ ಇಡ್ಲಿ ಸವಿದು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಪುಟ್ಟ ಹೋಟೆಲ್, ಮೈಸೂರುಸಿಟಿಯಿಂದ ಕೇವಲ 30ಕಿಮೀ ದೂರದಲ್ಲಿದೆ.

andolanait

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

15 mins ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

17 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

19 mins ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

21 mins ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

24 mins ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

26 mins ago