BREAKING NEWS

ಸಾವಿರಾರು ಮಂದಿ ಇಡ್ಲಿ ಪ್ರಿಯರನ್ನು ಅಗಲಿದ ಬೆಣ್ಣೆ ಇಡ್ಲಿ ಖ್ಯಾತಿಯ ಶಿವಪ್ಪ

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಗ್ರಾಮದ ಬೆಣ್ಣೆ ಇಡ್ಲಿಗೆ ಖ್ಯಾತಿಯಾಗಿದ್ದ ಶಿವಪ್ಪ ಅವರು ಇಂದು ನಿಧನರಾಗಿದ್ದಾರೆ.


ಶಿವಪ್ಪ ಅವರು ತಮ್ಮ ಸ್ಕೂಟರ್‌ ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದು ಸ್ಕೂಟರ್‌ ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆತರಲಾಗಿತ್ತು.
ಆದರೆ ನೆನ್ನೆ ರಾತ್ರಿ ತೀವ್ರ ನೋವಿನಿಂದ ನರಳುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗಮಧ್ಯೆ  ಸಾವಿಗೀಡಾಗಿದ್ದಾರೆ.
ಮೃತರು ಪತ್ನಿ, ಪುತ್ರ ಸೇರಿದಂತೆ ಸಾವಿರಾರು ಮಂದಿ ಇಡ್ಲಿ ಪ್ರಿಯರನ್ನು ಅಗಲಿದ್ದಾರೆ, ಇವರ ಅಂತ್ಯಕ್ರಿಯೆಯು ಸ್ವಗ್ರಾಮ ದರಸಗುಪ್ಪೆಯಲ್ಲಿ ನಡೆಯಲಿದೆ.
ಶಿವಪ್ಪ ಅವರು ಕಳೆದ 30 ವರ್ಷಗಳಿಂದ ತಮ್ಮ ಮನೆಯ ಪಕ್ಕದಲ್ಲೇ ಹೋಟೆಲ್ ನಡೆಸುತ್ತಿದ್ದರು.  ಆರು ಇಡ್ಲಿ, ಬೆಣ್ಣೆ ಮತ್ತು ಚಟ್ನಿ ಒಳಗೊಂಡಿರುವ ಪ್ರತಿ ಪ್ಲೇಟ್‌ಗೆ ₹ 40 ಪಡೆದುಕೊಳ್ಳುತ್ತಿದ್ದರು. ರಾಮನಗರ ಮೂಲದವರಾದ ಶಿವಪ್ಪ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ದರಸಗುಪ್ಪೆ ಗ್ರಾಮದಲ್ಲಿ ನೆಲೆಸಿದ್ದ ಇವರು ಚಾಮರಾಜನಗರ ಬೀದರ್ ರಾಷ್ಟ್ರೀಯ ಹೆದ್ದಾರಿ ಬಾಜುವಿನಲ್ಲಿದ್ದ ತಮ್ಮ ಮನೆಯಲ್ಲಿಯೇ ಜೀವನೋಪಾಯಕ್ಕೆ ಸಣ್ಣ ಟೀ ಅಂಗಡಿ ಪ್ರಾರಂಭಿಸಿದರು. ಶುಚಿ ಮತ್ತು ರುಚಿಗೆ ಖ್ಯಾತರಾಗಿದ್ದ ಶಿವಪ್ಪ ಅವರ ಹೋಟೆಲ್‍ನಲ್ಲಿ ಟೀ ಕುಡಿಯಲು ಜನ ತಂಡ ತಂಡವಾಗಿ ಆಗಮಿಸುತ್ತಿದ್ದರು. ನಂತರ ಸಣ್ಣದಾಗಿ ಬೆಳಗಿನ ಉಪಹಾರ ಇಡ್ಲಿ ಮಾರಲು ಪ್ರಾರಂಭಿಸಿದರು. ನೋಡ ನೋಡುತ್ತಿದ್ದಂತೆಯೇ ಅವರ ಇಡ್ಲಿ ಬೆಣ್ಣೆ ಇಡ್ಲಿ ಎಂದೇ ಜನಪ್ರಿಯವಾಯಿತು. ಇವರು ಮಾಡುವ ಇಡ್ಲಿಗೆ ಜನರು ಗಂಟೆ ಗಟ್ಟಲೇ ಕಾಯುವಂತಾಗಿತ್ತು.

ಶ್ರೀರಂಗಪಟ್ಟಣ-ಬೀದರ್ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಈ ಪುಟ್ಟ ಹೋಟೆಲ್ ದಕ್ಷಿಣ ಭಾರತದಲ್ಲಿ ಹೆಸರು ವಾಸಿಯಾಗಿತ್ತು. ಹೋಟೆಲ್‍ಗೆ ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯ ಪ್ರವಾಸಿಗರು ಇಡ್ಲಿ ತಿನ್ನಲು ಆಗಮಿಸುತ್ತಿದ್ದರು. ನಟರಾದ ಪ್ರಕಾಶ್ ರೈ ಹಾಗೂ ಸಿಹಿಕಹಿ ಚಂದ್ರು ಅವರು ತಮ್ಮ ಕಾರ್ಯಕ್ರಮಕ್ಕಾಗಿ ಆಗಮಿಸಿ ಇವರ ಇಡ್ಲಿ ಸವಿದು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಪುಟ್ಟ ಹೋಟೆಲ್, ಮೈಸೂರುಸಿಟಿಯಿಂದ ಕೇವಲ 30ಕಿಮೀ ದೂರದಲ್ಲಿದೆ.

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

2 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

2 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago