BREAKING NEWS

ವಿಧಾನಪರಿಷತ್ ನ ಮೂರು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ : ಇಂದೇ ಹೊರಬೀಳಲಿದೆ ಅಧಿಕೃತ ಅಧಿಸೂಚನೆ

ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ ಮೂರು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದು, ಇಂದು ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

ಇಂದಿನಿಂದಲೇ ನಾಮಪತ್ರ ಪ್ರಕ್ರಿಯೆ ಆರಂಭವಾಗಲಿದ್ದು, ಜೂ.20 ರವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ವಿಧಾನಪರಿಷತ್ ಸದಸ್ಯರಾಗಿದ್ದ ಬಾಬಾರಾವ್ ಚಿಂಚನಸೂರ್ , ಆರ್ ಶಂಕರ್, ಹಾಗೂ ಲಕ್ಷ್ಮಣ ಸವದಿ ಅವರು ಮೇಲ್ಮನೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯಿಂದ ತೆರವಾಗಿರುವ 3 ಸ್ಥಾನಗಳಿಗೆ ಭಾರತೀಯ ಚುನಾವಣಾ ಆಯೋಗ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ.

ವಿಧಾನಪರಿಷತ್ ನ ಉಪಚುನಾವಣೆಯ ಚುನಾವಣಾ ಅಧಿಕಾರಿಯಾಗಿ ವಿಧಾನಸಭೆ ಕಾರ್ಯದರ್ಶಿ ಕಾರ್ಯ ನಿರ್ವಹಿಸಲಿದ್ದಾರೆ.

ತೆರವಾಗಿರುವ 3 ಸ್ಥಾನಗಳು ಬೇರೆ ಬೇರೆ ಅವಧಿಯನ್ನು ಹೊಂದಿರುವುದರಿಂದ 3 ಪ್ರತ್ಯೇಕ ಉಪಚುನಾವಣೆಯ ಅಧಿಸೂಚನೆಗಳೂ ವೇಳಾಪಟ್ಟಿಯಂತೆ ಪ್ರಕಟವಾಗಲಿವೆ.

ಜೂ.21ರಂದು ಸಲ್ಲಿಕೆಯಾಗುವ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂ.23ರವರೆಗೂ ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶವಿದೆ. ಅಗತ್ಯ ಬಿದ್ದರೆ ಜೂ.30 ರಂದು ಮತದಾನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ.

ಮತದಾನ ಮುಗಿದ ಬಳಿಕ ಸಂಜೆ 5 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ.

ವಿಧಾನ ಪರಿಷತ್ ನ 3 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಯುವುದರಿಂದ ಆಡಳಿತಾರೂಢ ಕಾಂಗ್ರೆಸ್ 135 ಶಾಸಕರನ್ನು ಹೊಂದಿದ್ದು, ಸುಲಭವಾಗಿ 3 ಸ್ಥಾನಗಳನ್ನು ಗೆಲ್ಲಬಹುದಾಗಿದೆ.ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಈ ಉಪಚುನಾವಣೆಯಿಂದ ದೂರ ಉಳಿಯುವ ಸಾಧ್ಯತೆಗಳು ಹೆಚ್ಚಾಗಿವೆ.

ಒಂದು ವೇಳೆ ಪ್ರತಿಪಕ್ಷಗಳು ಈ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡದಿದ್ದರೆ ಕಾಂಗ್ರೆಸ್ ನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.

ಚುನಾವಣಾ ವೇಳಾಪಟ್ಟಿ ಘೋಷಣೆಯ ಬೆನ್ನಲ್ಲೇ ಮೇಲ್ಮನೆ ಸದಸ್ಯರಾಗಲು ಕಾಂಗ್ರೆಸ್ ನಲ್ಲಿ ತೀವ್ರ ಪೈಪೋಟಿ ಏರ್ಪಟ್ಟು, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಆ ಪಕ್ಷದ ವರಿಷ್ಠರನ್ನು ಸಂಪರ್ಕಿಸಿ ವಿಧಾನಪರಿಷತ್ ಸದಸ್ಯ ಸ್ಥಾನದ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ.

lokesh

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

4 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

5 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

5 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

6 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

7 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

7 hours ago