ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ ಮೂರು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದು, ಇಂದು ಅಧಿಕೃತ ಅಧಿಸೂಚನೆ ಹೊರಬೀಳಲಿದೆ.
ಇಂದಿನಿಂದಲೇ ನಾಮಪತ್ರ ಪ್ರಕ್ರಿಯೆ ಆರಂಭವಾಗಲಿದ್ದು, ಜೂ.20 ರವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ವಿಧಾನಪರಿಷತ್ ಸದಸ್ಯರಾಗಿದ್ದ ಬಾಬಾರಾವ್ ಚಿಂಚನಸೂರ್ , ಆರ್ ಶಂಕರ್, ಹಾಗೂ ಲಕ್ಷ್ಮಣ ಸವದಿ ಅವರು ಮೇಲ್ಮನೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯಿಂದ ತೆರವಾಗಿರುವ 3 ಸ್ಥಾನಗಳಿಗೆ ಭಾರತೀಯ ಚುನಾವಣಾ ಆಯೋಗ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ.
ವಿಧಾನಪರಿಷತ್ ನ ಉಪಚುನಾವಣೆಯ ಚುನಾವಣಾ ಅಧಿಕಾರಿಯಾಗಿ ವಿಧಾನಸಭೆ ಕಾರ್ಯದರ್ಶಿ ಕಾರ್ಯ ನಿರ್ವಹಿಸಲಿದ್ದಾರೆ.
ತೆರವಾಗಿರುವ 3 ಸ್ಥಾನಗಳು ಬೇರೆ ಬೇರೆ ಅವಧಿಯನ್ನು ಹೊಂದಿರುವುದರಿಂದ 3 ಪ್ರತ್ಯೇಕ ಉಪಚುನಾವಣೆಯ ಅಧಿಸೂಚನೆಗಳೂ ವೇಳಾಪಟ್ಟಿಯಂತೆ ಪ್ರಕಟವಾಗಲಿವೆ.
ಜೂ.21ರಂದು ಸಲ್ಲಿಕೆಯಾಗುವ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂ.23ರವರೆಗೂ ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶವಿದೆ. ಅಗತ್ಯ ಬಿದ್ದರೆ ಜೂ.30 ರಂದು ಮತದಾನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ.
ಮತದಾನ ಮುಗಿದ ಬಳಿಕ ಸಂಜೆ 5 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ.
ವಿಧಾನ ಪರಿಷತ್ ನ 3 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಯುವುದರಿಂದ ಆಡಳಿತಾರೂಢ ಕಾಂಗ್ರೆಸ್ 135 ಶಾಸಕರನ್ನು ಹೊಂದಿದ್ದು, ಸುಲಭವಾಗಿ 3 ಸ್ಥಾನಗಳನ್ನು ಗೆಲ್ಲಬಹುದಾಗಿದೆ.ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಈ ಉಪಚುನಾವಣೆಯಿಂದ ದೂರ ಉಳಿಯುವ ಸಾಧ್ಯತೆಗಳು ಹೆಚ್ಚಾಗಿವೆ.
ಒಂದು ವೇಳೆ ಪ್ರತಿಪಕ್ಷಗಳು ಈ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡದಿದ್ದರೆ ಕಾಂಗ್ರೆಸ್ ನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.
ಚುನಾವಣಾ ವೇಳಾಪಟ್ಟಿ ಘೋಷಣೆಯ ಬೆನ್ನಲ್ಲೇ ಮೇಲ್ಮನೆ ಸದಸ್ಯರಾಗಲು ಕಾಂಗ್ರೆಸ್ ನಲ್ಲಿ ತೀವ್ರ ಪೈಪೋಟಿ ಏರ್ಪಟ್ಟು, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಆ ಪಕ್ಷದ ವರಿಷ್ಠರನ್ನು ಸಂಪರ್ಕಿಸಿ ವಿಧಾನಪರಿಷತ್ ಸದಸ್ಯ ಸ್ಥಾನದ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…