BREAKING NEWS

ವಿಧಾನಪರಿಷತ್ ನ ಮೂರು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ : ಇಂದೇ ಹೊರಬೀಳಲಿದೆ ಅಧಿಕೃತ ಅಧಿಸೂಚನೆ

ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ ಮೂರು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದು, ಇಂದು ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

ಇಂದಿನಿಂದಲೇ ನಾಮಪತ್ರ ಪ್ರಕ್ರಿಯೆ ಆರಂಭವಾಗಲಿದ್ದು, ಜೂ.20 ರವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ವಿಧಾನಪರಿಷತ್ ಸದಸ್ಯರಾಗಿದ್ದ ಬಾಬಾರಾವ್ ಚಿಂಚನಸೂರ್ , ಆರ್ ಶಂಕರ್, ಹಾಗೂ ಲಕ್ಷ್ಮಣ ಸವದಿ ಅವರು ಮೇಲ್ಮನೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯಿಂದ ತೆರವಾಗಿರುವ 3 ಸ್ಥಾನಗಳಿಗೆ ಭಾರತೀಯ ಚುನಾವಣಾ ಆಯೋಗ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ.

ವಿಧಾನಪರಿಷತ್ ನ ಉಪಚುನಾವಣೆಯ ಚುನಾವಣಾ ಅಧಿಕಾರಿಯಾಗಿ ವಿಧಾನಸಭೆ ಕಾರ್ಯದರ್ಶಿ ಕಾರ್ಯ ನಿರ್ವಹಿಸಲಿದ್ದಾರೆ.

ತೆರವಾಗಿರುವ 3 ಸ್ಥಾನಗಳು ಬೇರೆ ಬೇರೆ ಅವಧಿಯನ್ನು ಹೊಂದಿರುವುದರಿಂದ 3 ಪ್ರತ್ಯೇಕ ಉಪಚುನಾವಣೆಯ ಅಧಿಸೂಚನೆಗಳೂ ವೇಳಾಪಟ್ಟಿಯಂತೆ ಪ್ರಕಟವಾಗಲಿವೆ.

ಜೂ.21ರಂದು ಸಲ್ಲಿಕೆಯಾಗುವ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂ.23ರವರೆಗೂ ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶವಿದೆ. ಅಗತ್ಯ ಬಿದ್ದರೆ ಜೂ.30 ರಂದು ಮತದಾನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ.

ಮತದಾನ ಮುಗಿದ ಬಳಿಕ ಸಂಜೆ 5 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ.

ವಿಧಾನ ಪರಿಷತ್ ನ 3 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಯುವುದರಿಂದ ಆಡಳಿತಾರೂಢ ಕಾಂಗ್ರೆಸ್ 135 ಶಾಸಕರನ್ನು ಹೊಂದಿದ್ದು, ಸುಲಭವಾಗಿ 3 ಸ್ಥಾನಗಳನ್ನು ಗೆಲ್ಲಬಹುದಾಗಿದೆ.ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಈ ಉಪಚುನಾವಣೆಯಿಂದ ದೂರ ಉಳಿಯುವ ಸಾಧ್ಯತೆಗಳು ಹೆಚ್ಚಾಗಿವೆ.

ಒಂದು ವೇಳೆ ಪ್ರತಿಪಕ್ಷಗಳು ಈ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡದಿದ್ದರೆ ಕಾಂಗ್ರೆಸ್ ನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.

ಚುನಾವಣಾ ವೇಳಾಪಟ್ಟಿ ಘೋಷಣೆಯ ಬೆನ್ನಲ್ಲೇ ಮೇಲ್ಮನೆ ಸದಸ್ಯರಾಗಲು ಕಾಂಗ್ರೆಸ್ ನಲ್ಲಿ ತೀವ್ರ ಪೈಪೋಟಿ ಏರ್ಪಟ್ಟು, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಆ ಪಕ್ಷದ ವರಿಷ್ಠರನ್ನು ಸಂಪರ್ಕಿಸಿ ವಿಧಾನಪರಿಷತ್ ಸದಸ್ಯ ಸ್ಥಾನದ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ.

lokesh

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

11 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

11 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

11 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

12 hours ago