ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ ಮೂರು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದು, ಇಂದು ಅಧಿಕೃತ ಅಧಿಸೂಚನೆ ಹೊರಬೀಳಲಿದೆ.
ಇಂದಿನಿಂದಲೇ ನಾಮಪತ್ರ ಪ್ರಕ್ರಿಯೆ ಆರಂಭವಾಗಲಿದ್ದು, ಜೂ.20 ರವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ವಿಧಾನಪರಿಷತ್ ಸದಸ್ಯರಾಗಿದ್ದ ಬಾಬಾರಾವ್ ಚಿಂಚನಸೂರ್ , ಆರ್ ಶಂಕರ್, ಹಾಗೂ ಲಕ್ಷ್ಮಣ ಸವದಿ ಅವರು ಮೇಲ್ಮನೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯಿಂದ ತೆರವಾಗಿರುವ 3 ಸ್ಥಾನಗಳಿಗೆ ಭಾರತೀಯ ಚುನಾವಣಾ ಆಯೋಗ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ.
ವಿಧಾನಪರಿಷತ್ ನ ಉಪಚುನಾವಣೆಯ ಚುನಾವಣಾ ಅಧಿಕಾರಿಯಾಗಿ ವಿಧಾನಸಭೆ ಕಾರ್ಯದರ್ಶಿ ಕಾರ್ಯ ನಿರ್ವಹಿಸಲಿದ್ದಾರೆ.
ತೆರವಾಗಿರುವ 3 ಸ್ಥಾನಗಳು ಬೇರೆ ಬೇರೆ ಅವಧಿಯನ್ನು ಹೊಂದಿರುವುದರಿಂದ 3 ಪ್ರತ್ಯೇಕ ಉಪಚುನಾವಣೆಯ ಅಧಿಸೂಚನೆಗಳೂ ವೇಳಾಪಟ್ಟಿಯಂತೆ ಪ್ರಕಟವಾಗಲಿವೆ.
ಜೂ.21ರಂದು ಸಲ್ಲಿಕೆಯಾಗುವ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂ.23ರವರೆಗೂ ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶವಿದೆ. ಅಗತ್ಯ ಬಿದ್ದರೆ ಜೂ.30 ರಂದು ಮತದಾನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ.
ಮತದಾನ ಮುಗಿದ ಬಳಿಕ ಸಂಜೆ 5 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ.
ವಿಧಾನ ಪರಿಷತ್ ನ 3 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಯುವುದರಿಂದ ಆಡಳಿತಾರೂಢ ಕಾಂಗ್ರೆಸ್ 135 ಶಾಸಕರನ್ನು ಹೊಂದಿದ್ದು, ಸುಲಭವಾಗಿ 3 ಸ್ಥಾನಗಳನ್ನು ಗೆಲ್ಲಬಹುದಾಗಿದೆ.ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಈ ಉಪಚುನಾವಣೆಯಿಂದ ದೂರ ಉಳಿಯುವ ಸಾಧ್ಯತೆಗಳು ಹೆಚ್ಚಾಗಿವೆ.
ಒಂದು ವೇಳೆ ಪ್ರತಿಪಕ್ಷಗಳು ಈ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡದಿದ್ದರೆ ಕಾಂಗ್ರೆಸ್ ನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.
ಚುನಾವಣಾ ವೇಳಾಪಟ್ಟಿ ಘೋಷಣೆಯ ಬೆನ್ನಲ್ಲೇ ಮೇಲ್ಮನೆ ಸದಸ್ಯರಾಗಲು ಕಾಂಗ್ರೆಸ್ ನಲ್ಲಿ ತೀವ್ರ ಪೈಪೋಟಿ ಏರ್ಪಟ್ಟು, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಆ ಪಕ್ಷದ ವರಿಷ್ಠರನ್ನು ಸಂಪರ್ಕಿಸಿ ವಿಧಾನಪರಿಷತ್ ಸದಸ್ಯ ಸ್ಥಾನದ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…