BREAKING NEWS

ಸಂಪುಟ ಸಭೆ| ಪಂಚ ಗ್ಯಾರಂಟಿಗಳ ಪೈಕಿ ಯಾವುದೆಲ್ಲಾ ಘೋಷಣೆ: ಸಿದ್ದು ಸರ್ಕಾರದತ್ತ ಎಲ್ಲರ ಚಿತ್ತ

ಬೆಂಗಳೂರು: ಕಾಂಗ್ರೆಸ್ ಐದು ಘೋಷಣೆಗಳ ಪೈಕಿ ಯಾವುದನ್ನೆಲ್ಲಾ ಅಧಿಕೃತವಾಗಿ ಜಾರಿಗೆ ತರಲಾಗುತ್ತದೆ ಎಂಬ ಕುತೂಹಲ ಸದ್ಯಕ್ಕೆ ತೀವ್ರಗೊಂಡಿದೆ. ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ, ಶಕ್ತಿ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಶುಕ್ರವಾರ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.

ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಐದು ಗ್ಯಾರಂಟಿಗಳ ಕುರಿತಾದ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಐದೂ ಗ್ಯಾರಂಟಿಗಳು ಏಕಕಾಲಕ್ಕೆ ಜಾರಿಗೆ ಬರುತ್ತಾ?
ಪಂಚ ಗ್ಯಾರಂಟಿಗಳ ಪೈಕಿ ಎಲ್ಲವನ್ನೂ ಒಂದೇ ಬಾರಿಗೆ ಜಾರಿಗೆ ತರಲಾಗುತ್ತದಾ ಎಂಬ ಪ್ರಶ್ನೆ ಸಹಜವಾಗಿ ಉದ್ಭವವಾಗುತ್ತಿದೆ. ಆದರೆ ಕೆಲವು ಮೂಲಗಳ ಪ್ರಕಾರ ಮೊದಲ ಹಂತದಲ್ಲಿ ಮೂರು ಯೋಜನೆಗಳನ್ನು ಜಾರಿಗೆ ತರುವ ಸಾಧ್ಯತೆ ದಟ್ಟವಾಗಿದೆ.

ಉಳಿದ ಎರಡು ಯೋಜನೆಗಳನ್ನು ಮತ್ತಷ್ಟು ಅಧ್ಯಯನ ನಡೆಸಿ ಜಾರಿಗೆ ತರುವ ಸಾಧ್ಯತೆ ಇದೆ. ಐದು ಗ್ಯಾರಂಟಿಗಳ ಪೈಕಿ 200 ಯೂನಿಟ್ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಮೊದಲ ಹಂತದಲ್ಲಿ ಜಾರಿಗೊಳಿಸುವ ಚಿಂತನೆ ಸರ್ಕಾರದ ಮುಂದಿದೆ ಎಂದು ತಿಳಿದುಬಂದಿದೆ.

ಷರತ್ತುಗಳು ಅನ್ವಯ?
ಐದು ಗ್ಯಾರಂಟಿಗಳಿಗೆ ಷರತ್ತುಗಳನ್ನು ಅನ್ವಯ ಮಾಡುವ ಸಾಧ್ಯತೆಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಈಗಾಗಲೇ ಹಣಕಾಸು ಇಲಾಖೆ ಸೇರಿದಂತೆ ವಿವಿಧ ಇಲಾಖಾ ಸಚಿವರುಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಚರ್ಚೆ ಮಾಡಿದ್ದಾರೆ.

ಬುಧವಾರ ಸಚಿವರ ಜೊತೆಗಿನ ಸಭೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಕೂಡಾ ರಾಜ್ಯದ ಹಣಕಾಸು ಸ್ಥಿತಿಗತಿಯ ಬಗ್ಗೆ ಪೂರ್ಣ ವಿವರ ನೀಡಿದ್ದಾರೆ. ಇನ್ನು ಐದು ಗ್ಯಾರಂಟಿಗಳ ಪೈಕಿ 200 ಯೂನಿಟ್ ಪ್ರತಿ ಮನೆಗೆ ವಿದ್ಯುತ್ ಕೊಡಲು 12,000 ಕೋಟಿ ಆರ್ಥಿಕ ಹೊರೆ ಸರ್ಕಾರದ ಮೇಲೆ ಬೀಳಲಿದೆ ಎಂದು ಅಂದಾಜಿಸಲಾಗಿದೆ.

ಅದೇ ರೀತಿಯಲ್ಲಿ ಅನ್ನಭಾಗ್ಯ ಯೋಜನೆಗೆ 7500 ಕೋಟಿ ಆರ್ಥಿಕ ಹೊರೆ ಸರ್ಕಾರದ ಮೇಲೆ ಬೀಳುವ ಸಾಧ್ಯತೆ ಇದೆ. ಜೊತೆಗೆ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ 3000 ಕೋಟಿ ಆರ್ಥಿಕ ಹೊರೆ ಸರ್ಕಾರದ ಮೇಲೆ ಬೀಳಲಿದೆ ಎಂದು ಅಂದಾಜು ಮಾಡಲಾಗಿದೆ.

ಸದ್ಯಕ್ಕೆ ಮೂರು ಯೋಜನೆಗಳನ್ನು ಜಾರಿಗೆ ತಂದಲ್ಲಿ ಒಟ್ಟಾರೆ 22 ಸಾವಿರ ಕೋಟಿಯಿಂದ 25,000 ಕೋಟಿ ಆರ್ಥಿಕ ಹೊರೆ ಸರ್ಕಾರದ ಮೇಲೆ ಆಗಬಹುದು ಎಂದು ಆರ್ಥಿಕ ಇಲಾಖೆ ಅಂದಾಜು ಮಾಡಿದೆ.

ಈ ನಿಟ್ಟಿನಲ್ಲಿ ಕೆಲವೊಂದು ಷರತ್ತುಗಳನ್ನು ಅನ್ವಯ ಮಾಡಿದ್ದಲ್ಲಿ ಆರ್ಥಿಕ ಹೊರೆ ಕಡಿತವಾಗಬಹುದು. ಈ ಎಲ್ಲಾ ನಿಟ್ಟಿನಲ್ಲಿ ಸರ್ಕಾರ ಆಲೋಚನೆ ಮಾಡುತ್ತಿದೆ. ಅಂತಿಮವಾಗಿ ಶುಕ್ರವಾರ 11 ಗಂಟೆಗೆ ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತಾಗಿ ಚರ್ಚೆ ನಡೆಸಿ ಅಂತಿಮ ಘೋಷಣೆಯನ್ನು ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

27 mins ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

30 mins ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

36 mins ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

55 mins ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

1 hour ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago