BREAKING NEWS

ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು : ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್​.ಕೆ. ಪಾಟೀಲ್ ಅವರು, ಸಚಿವ ಸಂಪುಟ ಸಭೆಯಲ್ಲಿ ಒಟ್ಟು 16 ವಿಷಗಳ ಮೇಲೆ ಚರ್ಚೆ ನಡೆದಿದೆ ಎಂದರು.

ಲೋಕಾಯುಕ್ತ ಪ್ರಕರಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಡಾ.ಎಂ. ಎಚ್. ನಾಗೇಶ್ ಅವರಿಗೆ ಐದು ವರ್ಷ ಜೈಲು ಶಿಕ್ಷೆ ಆಗಿರುವ ಹಿನ್ನೆಲೆಯಲ್ಲಿ ಅವರಿಗೆ ಕಡ್ಡಾಯ ನಿವೃತ್ತಿ ನೀಡಲು ಅನುಮೋದನೆ ನೀಡಲಾಗಿದೆ ಎಂದು ಎಚ್ ಕೆ ಪಾಟೀಲ್ ಅವರು ತಿಳಿಸಿದ್ದಾರೆ.

ಇನ್ನು ಲೋಕಾಯುಕ್ತರ ಬಲೆಗೆ ಬಿದ್ದಿದ್ದ ರಾಮನಗರ ಜಿಲ್ಲಾ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ‌.ಉಷಾ ಕದರಮಂಡಲಗಿ, ಇಂದಿರಾನಗರ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ.ಎಸ್.ಟಿ ನಾಗಮಣಿ ಅವರಿಗೆ ಕಡ್ಡಾಯ ನಿವೃತ್ತಿ ದಂಡನೆಗೆ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ಸಚಿವರು ಹೇಳಿದ್ದಾರೆ.

ಅಲ್ಲದೆ, ಪೋಕ್ಸೋ ಜೈಲು ಶಿಕ್ಷೆಗೆ ಗುರಿಯಾಗಿರುವ ಹೂವಿನಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಎನ್ ಹಳ್ಳಿಗುಡಿ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಎಸ್.ಸಿ. ಎಸ್.ಟಿ. ಮೀಸಲು ಕ್ಷೇತ್ರಗಳಲ್ಲಿ 20 ಸಂಚಾರಿ ಆರೋಗ್ಯ ಘಟಕಗಳ ಸ್ಥಾಪನೆಗೆ 20.07 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಏರೋ ಸ್ಪೇಸ್ ಉತ್ಪಾದನೆ ಹಾಗೂ ರಕ್ಷಣಾ ಉತ್ಕೃಷ್ಟತಾ ಕೇಂದ್ರದ ಸ್ಥಾಪನೆಗೂ ಅನುಮೋದನೆ ದೊರಕಿದೆ. ಸೈಬರ್ ಅಪರಾಧ ತಡೆಗಟ್ಟುವುದು ಸೇರಿದಂತೆ ಕ್ರಮ ತೆಗೆದುಕೊಳ್ಳಲು ಕೇಂದ್ರದ ಉಪಯೋಗ ಪಡೆಯುವುದು ಹಾಗೂ ಇದರ ಪರಿಷ್ಕೃತ ವೆಚ್ಚ 391 ಕೋಟಿ ರೂಪಾಯಿ ಬಿಡುಗಡಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ 325 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟದಲ್ಲಿ ಚರ್ಚೆ ನಡೆದಿದ್ದು, ಆಸ್ಪತ್ರೆ ಕಟ್ಟಡದ ಪರಿಷ್ಕೃತ ವೆಚ್ಚ 187.90 ಕೋಟಿ ರೂಪಾಯಿ ನೀಡಲು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

andolanait

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

6 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

6 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

6 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

7 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

16 hours ago