ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆ ನೋಂದಣಿಗೆ ಸಾಲನೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿಗೆ ಸವಾಲ್ ಹಾಕಿದ್ದಾರೆ.
ನಾವು ನುಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಕೊಟ್ಟು, ವಚನ ಪಾಲನೆ ಮಾಡಿದ್ದೇವೆ. ಮಿಸ್ಟರ್ ನರೇಂದ್ರ ಮೋದಿ ಅವರೇ, ವರ್ಷಕ್ಕೆ 2 ಕೋಟಿಯಂತೆ ನಿಮ್ಮ ಸರ್ಕಾರ ಹತ್ತು ವರ್ಷಕ್ಕೆ 20 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ದೇಶದ ಜನರಿಗೆ ಲೆಕ್ಕ ಕೊಡಿ ಎಂದು ಪ್ರಶ್ನಿಸಿದ್ದಾರೆ.
ವಿಧಾನಸೌಧದ ಬ್ಲ್ಯಾಂಕೇಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಿಎಂ ಸಿದ್ದರಾಮಯ್ಯನವರು, ಈ ಯೋಜನೆಗೆ ಚಾಲನೆ ನೀಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ, ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
2022-23ನೇ ಸಾಲಿನಲ್ಲಿ ಪದವಿ ಪಡೆದು ಆರು ತಿಂಗಳಾದರೂ ಉದ್ಯೋಗ ಸಿಗದ ನಿರುದ್ಯೋಗಿ ಯುವಜನರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸಿ, ಇಷ್ಟದ ಉದ್ಯೋಗ ಪಡೆಯಲು ನೆರವಾಗುವ ಉದ್ದೇಶದೊಂದಿಗೆ ರೂಪಿಸಿರುವ ಯೋಜನೆಯೇ ಯುವನಿಧಿ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…