BREAKING NEWS

ಅಮೆರಿಕದಲ್ಲಿ ಹರಡುತ್ತಿದೆ ಕ್ಯಾಂಡಿಡಾ ಔರಿಸ್ ಫಂಗಸ್

ಮೋರ್ಗನ್‌ಟೌನ್ : ಅಮೆರಿಕದಾದ್ಯಂತ ಆಸ್ಪತ್ರೆಗಳಲ್ಲಿರುವ ರೋಗಿಗಳು ’ಕ್ಯಾಂಡಿಡಾ ಔರಿಸ್’ ಎಂಬ ಹೆಸರಿನ ಶಿಲೀಂಧ್ರ ಸೋಂಕಿನಿಂದ ಅಲರ್ಜಿಗೆ ತುತ್ತಾಗಿ ಸಾವಿಗೀಡಾಗುತ್ತಿದ್ದಾರೆ. ಈ ಸೋಂಕು ತೀವ್ರವಾಗಿ ಹಬ್ಬುತ್ತಿದ್ದು ಎಚ್ಚರದಿಂದ ಇರಬೇಕೆಂದು ಅಮೆರಿಕದ ರೋಗ ನಿಯಂತ್ರಣ ಕೇಂದ್ರ ತಿಳಿಸಿದೆ.
ಇತ್ತೀಚೆಗೆ ಪತ್ತೆಯಾದ ಈ ರೋಗಕಾರಕ ಫಂಗಸ್‌ ಪ್ರಮಾಣದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುತ್ತಿದ್ದು ಮುಖ್ಯವಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಅಲರ್ಜಿ ಉಂಟುಮಾಡಿ ಅವರ ಸಾವಿಗೆ ಕಾರಣವಾಗಿರುವುದು, ಅಮೆರಿಕದ ಜನತೆಗೆ ಆತಂಕವನ್ನುಂಟು ಮಾಡಿದೆ.

ಏನಿದು ಕ್ಯಾಂಡಿಡಾ ಔರಿಸ್?: ಇದು ಪ್ರಥಮಬಾರಿಗೆ 2009ರಲ್ಲಿ ಕಂಡುಬಂತು. ಕ್ಯಾಂಡಿಡಾ ಏಕಕೋಶ ಶಿಲೀಂಧ್ರವಾಗಿದ್ದು, 2019ರಿಂದ ಅಮೆರಿಕದಲ್ಲಿ ಈ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳಕಂಡುಬರುತ್ತಿದೆ. ಮನುಷ್ಯನ ಜೀವಕ್ಕೇ ಅಪಾಯ ತಂಡೊಡ್ಡುವ ಕ್ಯಾಂಡಿಡಾ, ಸದ್ಯಕ್ಕಿರುವ ಫಂಗಸ್‌ ನಿರೋಧಕ ಔಷಧಗಳ ವಿರುದ್ಧ ಪ್ರತಿರೋಧಿಸುವ ಸಾಮರ್ಥ್ಯ ಹೊಂದಿದೆ.

ಇದು ಆರೋಗ್ಯವಂತರಿಗೆ ಹೆಚ್ಚಾಗಿ ಬಾಧಿಸದೇ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೇ ಹೆಚ್ಚಾಗಿ ತಗುಲುತ್ತಿದೆ ಎಂದು ರೋಗ ನಿಯಂತ್ರಣ ಕೇಂದ್ರ ತಿಳಿಸಿದೆ.

 

lokesh

Recent Posts

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

3 mins ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

16 mins ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

57 mins ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

1 hour ago

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಪಂಚಾಯಿತಿ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

3 hours ago

ಮಡಿಕೇರಿ: ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್:‌ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(‌24) ಆತ್ಮಹತ್ಯೆ ಮಾಡಿಕೊಂಡಿರುವ…

3 hours ago