BREAKING NEWS

ಬಿಜೆಪಿಯವರನ್ನು ಕೇಳಿಕೊಂಡು ಅಧಿಕಾರ ಮಾಡಲು ಆಗುವುದಿಲ್ಲ: ಡಾ.ಜಿ.ಪರಮೇಶ್ವರ್

ಬೆಂಗಳೂರು: ಬಿಜೆಪಿಯವರು ಈಗ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಮಾತನ್ನಾಡುತ್ತಿದ್ದಾರೆ. ದೇಶದ ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನವೇ ಭಗವದ್ಗೀತೆ, ಬೈಬಲ್, ಕುರಾನ್. ಸಂವಿಧಾನ ಭಾರತೀಯರಿಗೆ ಗ್ರಂಥ ಇದ್ದಂತೆ. ಕಲಂ 25ರಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಧರ್ಮ ಆಯ್ಕೆಯ ಹಕ್ಕು ನೀಡಿದೆ. ಅದಕ್ಕೆ ವಿರುದ್ಧವಾಗಿ ಬಿಜೆಪಿಯವರು ಮತಾಂತರ ನಿಷೇಧ ಕಾಯ್ದೆ ಮಾಡಿದ್ದರು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.

ಬಿಜೆಪಿ ಸರ್ಕಾರ ಮಾಡಿದ ಕಾಯ್ದೆ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಸದನದಲ್ಲಿ ಮಸೂದೆ ಮಂಡಿಸಿದ ವೇಳೆಯೇ ಹೇಳಿದ್ದೆವು. ಈಗ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ನಮ್ಮ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದೆ. ಹಾಗಾಗಿ ನಾವು ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದುಕೊಳ್ಳುತ್ತಿದ್ದೇವೆ ಎಂದರು.

ಬಿಜೆಪಿ ವಿರುದ್ಧ ಪರಂ ವಾಗ್ದಾಳಿ: ಅಕ್ಕಿ ಪೂರೈಕೆ ತಿಕ್ಕಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರನ್ನು ಕೇಳಿಕೊಂಡು ಅಧಿಕಾರ ಮಾಡಲು ಆಗುವುದಿಲ್ಲ. ನಾವು ಈಗಾಗಲೇ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ. ಅದರಂತೆ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ಎಷ್ಟೇ ಕಷ್ಟವಾದರೂ ಜಾರಿಗೊಳಿಸುತ್ತೇವೆ. ಜನಪರ ಆಡಳಿತ ಕೊಡುವ ವಿಚಾರವಾಗಿ ರಾಜಿ ಪ್ರಶ್ನೆಯೇ ಇಲ್ಲ. ಇವರನ್ನು ಕೇಳಿಕೊಂಡು ನಾವು ಆಡಳಿತ ಮಾಡಬೇಕೇ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಮರಳು ಮಾಫಿಯಾ ತಲೆ ಎತ್ತಿದೆ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ಅಗತ್ಯವಿಲ್ಲ. ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದರು.

ನೀವು ಸಿಎಂ ಆಗುತ್ತೀರಾ ಎಂದು ಕೇಳಿತ್ತಿದ್ದಂತೆ ಉತ್ತರ ನೀಡದೆ ತೆರಳಿದರು. ‘ಅದೊಂದನ್ನ ಬಿಟ್ಟು ಬೇರೆ ಏನು ಬೇಕಾದರೂ ಕೇಳಿ’ ಎಂದಷ್ಟೆ ಹೇಳಿದರು.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

7 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

7 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

7 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

7 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

19 hours ago