BREAKING NEWS

ಬಿಜೆಪಿಯವರನ್ನು ಕೇಳಿಕೊಂಡು ಅಧಿಕಾರ ಮಾಡಲು ಆಗುವುದಿಲ್ಲ: ಡಾ.ಜಿ.ಪರಮೇಶ್ವರ್

ಬೆಂಗಳೂರು: ಬಿಜೆಪಿಯವರು ಈಗ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಮಾತನ್ನಾಡುತ್ತಿದ್ದಾರೆ. ದೇಶದ ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನವೇ ಭಗವದ್ಗೀತೆ, ಬೈಬಲ್, ಕುರಾನ್. ಸಂವಿಧಾನ ಭಾರತೀಯರಿಗೆ ಗ್ರಂಥ ಇದ್ದಂತೆ. ಕಲಂ 25ರಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಧರ್ಮ ಆಯ್ಕೆಯ ಹಕ್ಕು ನೀಡಿದೆ. ಅದಕ್ಕೆ ವಿರುದ್ಧವಾಗಿ ಬಿಜೆಪಿಯವರು ಮತಾಂತರ ನಿಷೇಧ ಕಾಯ್ದೆ ಮಾಡಿದ್ದರು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.

ಬಿಜೆಪಿ ಸರ್ಕಾರ ಮಾಡಿದ ಕಾಯ್ದೆ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಸದನದಲ್ಲಿ ಮಸೂದೆ ಮಂಡಿಸಿದ ವೇಳೆಯೇ ಹೇಳಿದ್ದೆವು. ಈಗ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ನಮ್ಮ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದೆ. ಹಾಗಾಗಿ ನಾವು ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದುಕೊಳ್ಳುತ್ತಿದ್ದೇವೆ ಎಂದರು.

ಬಿಜೆಪಿ ವಿರುದ್ಧ ಪರಂ ವಾಗ್ದಾಳಿ: ಅಕ್ಕಿ ಪೂರೈಕೆ ತಿಕ್ಕಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರನ್ನು ಕೇಳಿಕೊಂಡು ಅಧಿಕಾರ ಮಾಡಲು ಆಗುವುದಿಲ್ಲ. ನಾವು ಈಗಾಗಲೇ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ. ಅದರಂತೆ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ಎಷ್ಟೇ ಕಷ್ಟವಾದರೂ ಜಾರಿಗೊಳಿಸುತ್ತೇವೆ. ಜನಪರ ಆಡಳಿತ ಕೊಡುವ ವಿಚಾರವಾಗಿ ರಾಜಿ ಪ್ರಶ್ನೆಯೇ ಇಲ್ಲ. ಇವರನ್ನು ಕೇಳಿಕೊಂಡು ನಾವು ಆಡಳಿತ ಮಾಡಬೇಕೇ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಮರಳು ಮಾಫಿಯಾ ತಲೆ ಎತ್ತಿದೆ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ಅಗತ್ಯವಿಲ್ಲ. ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದರು.

ನೀವು ಸಿಎಂ ಆಗುತ್ತೀರಾ ಎಂದು ಕೇಳಿತ್ತಿದ್ದಂತೆ ಉತ್ತರ ನೀಡದೆ ತೆರಳಿದರು. ‘ಅದೊಂದನ್ನ ಬಿಟ್ಟು ಬೇರೆ ಏನು ಬೇಕಾದರೂ ಕೇಳಿ’ ಎಂದಷ್ಟೆ ಹೇಳಿದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

13 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

14 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

15 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

16 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

21 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

21 hours ago