BREAKING NEWS

ವಾಗ್ನರ್ ವಶಕ್ಕೆ ದಕ್ಷಿಣ ರಷ್ಯಾ ಸೇನಾ ಕೇಂದ್ರ ಕಚೇರಿ, ಸ್ಥಳೀಯರ ಬೆಂಬಲವಿದೆ: ಪ್ರಿಗೋಜಿನ್

ಮಾಸ್ಕೋ: ರಷ್ಯಾ ಅಧ್ಯಕ್ಷರ ವಿರುದ್ಧ ಬಂಡಾಯವೆದ್ದಿರುವ ಖಾಸಗಿ ಸೇನೆ ವಾಗ್ನರ್ ನ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ತಮ್ಮ ಪಡೆ, ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು ವಶಕ್ಕೆ ಪಡೆದಿದ್ದಾಗಿ ಹೇಳಿದ್ದಾರೆ.

ಒಂದೇ ಒಂದು ಗುಂಡನ್ನೂ ಹಾರಿಸದೇ ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು ವಶಪಡಿಸಿಕೊಂಡಿರುವುದಾಗಿ ಹೇಳಿರುವ ವಾಗ್ನರ್, ತಮಗೆ ಸ್ಥಳೀಯರ ಬೆಂಬಲವೂ ಇದೆ ಎಂದು ತಿಳಿಸಿದ್ದಾರೆ.

ಪ್ರಿಗೋಜಿನ್ ಪಡೆಯ ಫೈಟರ್ ಗಳು ರಷ್ಯಾ ಆಕ್ರಮಿತ ಉಕ್ರೇನ್ ಗೆ ನುಗ್ಗಿದ್ದು, ದಕ್ಷಿಣದ ನಗರದಲ್ಲಿನ ಸೇನಾ ಕಚೇರಿಯನ್ನು ವಶಕ್ಕೆ ಪಡೆದಿದ್ದಾರೆ. ಇದು ಉಕ್ರೇನ್ ನಲ್ಲಿರುವ ಮಾಸ್ಕೋ ಪಡೆಗಳ ಕಾರ್ಯಾಚರಣೆಯ ಪ್ರಮುಖ ಕೇಂದ್ರವಾಗಿದೆ.

ರಾಷ್ಟ್ರ ನಮಗೇಕೆ ಬೆಂಬಲ ನೀಡುತ್ತದೆ? ಏಕೆಂದರೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ ಎಂದು ಪ್ರಿಗೋಜಿನ್ ಟೆಲಿಗ್ರಾಮ್ ಮೂಲಕ ಪ್ರಕಟಿಸಿರುವ ತಮ್ಮ ಇತ್ತೀಚಿನ ಆಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ರೊಸ್ತೋವ್ ನ್ನು ಒಂದೇ ಒಂದೂ ಗುಂಡು ಹಾರಿಸದೇ ನಾವು (ಸೇನೆ) ಕೇಂದ್ರ ಕಚೇರಿಯನ್ನು ವಶಪಡಿಸಿಕೊಂಡಿದ್ದೇವೆ, ”ಎಂದು ಅವರು ಹೇಳಿದರು. ನಮ್ಮ ಪಡೆಗಳು ಒಬ್ಬನೇ ಒಬ್ಬ ಸೈನಿಕನನ್ನೂ ಮುಟ್ಟಿಲ್ಲ. ನಮ್ಮ ದಾರಿಯಲ್ಲಿ ನಾವು ಯಾರನ್ನೂ ಹತ್ಯೆ ಮಾಡಿಲ್ಲ, ಆದರೆ ನಮ್ಮ ಯೋಧರ ಮೇಲೆ ಫಿರಂಗಿ ಮತ್ತು ನಂತರ ಹೆಲಿಕಾಪ್ಟರ್‌ಗಳಿಂದ ದಾಳಿ ನಡೆಸಲಾಗಿದೆ ಎಂದು ಪ್ರಿಗೊಜಿನ್ ಹೇಳಿದ್ದಾರೆ.  ರೊಸ್ತೋವ್ ನಲ್ಲಿಯೂ ಸ್ಥಳೀಯರ ಬೆಂಬಲ ನಮಗೆ ಇದೆ ಎಂದು ಪುಟಿನ್ ಹೇಳಿದ್ದಾರೆ.

andolanait

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

8 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

8 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

8 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

9 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

9 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

9 hours ago