BREAKING NEWS

ವಾಗ್ನರ್ ವಶಕ್ಕೆ ದಕ್ಷಿಣ ರಷ್ಯಾ ಸೇನಾ ಕೇಂದ್ರ ಕಚೇರಿ, ಸ್ಥಳೀಯರ ಬೆಂಬಲವಿದೆ: ಪ್ರಿಗೋಜಿನ್

ಮಾಸ್ಕೋ: ರಷ್ಯಾ ಅಧ್ಯಕ್ಷರ ವಿರುದ್ಧ ಬಂಡಾಯವೆದ್ದಿರುವ ಖಾಸಗಿ ಸೇನೆ ವಾಗ್ನರ್ ನ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ತಮ್ಮ ಪಡೆ, ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು ವಶಕ್ಕೆ ಪಡೆದಿದ್ದಾಗಿ ಹೇಳಿದ್ದಾರೆ.

ಒಂದೇ ಒಂದು ಗುಂಡನ್ನೂ ಹಾರಿಸದೇ ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು ವಶಪಡಿಸಿಕೊಂಡಿರುವುದಾಗಿ ಹೇಳಿರುವ ವಾಗ್ನರ್, ತಮಗೆ ಸ್ಥಳೀಯರ ಬೆಂಬಲವೂ ಇದೆ ಎಂದು ತಿಳಿಸಿದ್ದಾರೆ.

ಪ್ರಿಗೋಜಿನ್ ಪಡೆಯ ಫೈಟರ್ ಗಳು ರಷ್ಯಾ ಆಕ್ರಮಿತ ಉಕ್ರೇನ್ ಗೆ ನುಗ್ಗಿದ್ದು, ದಕ್ಷಿಣದ ನಗರದಲ್ಲಿನ ಸೇನಾ ಕಚೇರಿಯನ್ನು ವಶಕ್ಕೆ ಪಡೆದಿದ್ದಾರೆ. ಇದು ಉಕ್ರೇನ್ ನಲ್ಲಿರುವ ಮಾಸ್ಕೋ ಪಡೆಗಳ ಕಾರ್ಯಾಚರಣೆಯ ಪ್ರಮುಖ ಕೇಂದ್ರವಾಗಿದೆ.

ರಾಷ್ಟ್ರ ನಮಗೇಕೆ ಬೆಂಬಲ ನೀಡುತ್ತದೆ? ಏಕೆಂದರೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ ಎಂದು ಪ್ರಿಗೋಜಿನ್ ಟೆಲಿಗ್ರಾಮ್ ಮೂಲಕ ಪ್ರಕಟಿಸಿರುವ ತಮ್ಮ ಇತ್ತೀಚಿನ ಆಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ರೊಸ್ತೋವ್ ನ್ನು ಒಂದೇ ಒಂದೂ ಗುಂಡು ಹಾರಿಸದೇ ನಾವು (ಸೇನೆ) ಕೇಂದ್ರ ಕಚೇರಿಯನ್ನು ವಶಪಡಿಸಿಕೊಂಡಿದ್ದೇವೆ, ”ಎಂದು ಅವರು ಹೇಳಿದರು. ನಮ್ಮ ಪಡೆಗಳು ಒಬ್ಬನೇ ಒಬ್ಬ ಸೈನಿಕನನ್ನೂ ಮುಟ್ಟಿಲ್ಲ. ನಮ್ಮ ದಾರಿಯಲ್ಲಿ ನಾವು ಯಾರನ್ನೂ ಹತ್ಯೆ ಮಾಡಿಲ್ಲ, ಆದರೆ ನಮ್ಮ ಯೋಧರ ಮೇಲೆ ಫಿರಂಗಿ ಮತ್ತು ನಂತರ ಹೆಲಿಕಾಪ್ಟರ್‌ಗಳಿಂದ ದಾಳಿ ನಡೆಸಲಾಗಿದೆ ಎಂದು ಪ್ರಿಗೊಜಿನ್ ಹೇಳಿದ್ದಾರೆ.  ರೊಸ್ತೋವ್ ನಲ್ಲಿಯೂ ಸ್ಥಳೀಯರ ಬೆಂಬಲ ನಮಗೆ ಇದೆ ಎಂದು ಪುಟಿನ್ ಹೇಳಿದ್ದಾರೆ.

andolanait

Recent Posts

ಮೈಸೂರು ಮೃಗಾಲಯದಲ್ಲಿ 9 ಮಂದಿ ಮಾತ್ರ ಖಾಯಂ ನೌಕರರಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…

52 mins ago

ವಿಪಕ್ಷಗಳ ವಿರೋಧದ ಮಧ್ಯೆ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…

1 hour ago

ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ಧ: ಸಚಿವ ಕೃಷ್ಣಭೈರೇಗೌಡ

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…

1 hour ago

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…

1 hour ago

ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರ

ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್‌ಗಾರ್‌ ಮತ್ತು ಅಜೀವಿಕಾ…

2 hours ago

ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಸಚಿವ ಪರಮೇಶ್ವರ್‌

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…

2 hours ago