BREAKING NEWS

ವಾಗ್ನರ್ ವಶಕ್ಕೆ ದಕ್ಷಿಣ ರಷ್ಯಾ ಸೇನಾ ಕೇಂದ್ರ ಕಚೇರಿ, ಸ್ಥಳೀಯರ ಬೆಂಬಲವಿದೆ: ಪ್ರಿಗೋಜಿನ್

ಮಾಸ್ಕೋ: ರಷ್ಯಾ ಅಧ್ಯಕ್ಷರ ವಿರುದ್ಧ ಬಂಡಾಯವೆದ್ದಿರುವ ಖಾಸಗಿ ಸೇನೆ ವಾಗ್ನರ್ ನ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ತಮ್ಮ ಪಡೆ, ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು ವಶಕ್ಕೆ ಪಡೆದಿದ್ದಾಗಿ ಹೇಳಿದ್ದಾರೆ.

ಒಂದೇ ಒಂದು ಗುಂಡನ್ನೂ ಹಾರಿಸದೇ ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು ವಶಪಡಿಸಿಕೊಂಡಿರುವುದಾಗಿ ಹೇಳಿರುವ ವಾಗ್ನರ್, ತಮಗೆ ಸ್ಥಳೀಯರ ಬೆಂಬಲವೂ ಇದೆ ಎಂದು ತಿಳಿಸಿದ್ದಾರೆ.

ಪ್ರಿಗೋಜಿನ್ ಪಡೆಯ ಫೈಟರ್ ಗಳು ರಷ್ಯಾ ಆಕ್ರಮಿತ ಉಕ್ರೇನ್ ಗೆ ನುಗ್ಗಿದ್ದು, ದಕ್ಷಿಣದ ನಗರದಲ್ಲಿನ ಸೇನಾ ಕಚೇರಿಯನ್ನು ವಶಕ್ಕೆ ಪಡೆದಿದ್ದಾರೆ. ಇದು ಉಕ್ರೇನ್ ನಲ್ಲಿರುವ ಮಾಸ್ಕೋ ಪಡೆಗಳ ಕಾರ್ಯಾಚರಣೆಯ ಪ್ರಮುಖ ಕೇಂದ್ರವಾಗಿದೆ.

ರಾಷ್ಟ್ರ ನಮಗೇಕೆ ಬೆಂಬಲ ನೀಡುತ್ತದೆ? ಏಕೆಂದರೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ ಎಂದು ಪ್ರಿಗೋಜಿನ್ ಟೆಲಿಗ್ರಾಮ್ ಮೂಲಕ ಪ್ರಕಟಿಸಿರುವ ತಮ್ಮ ಇತ್ತೀಚಿನ ಆಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ರೊಸ್ತೋವ್ ನ್ನು ಒಂದೇ ಒಂದೂ ಗುಂಡು ಹಾರಿಸದೇ ನಾವು (ಸೇನೆ) ಕೇಂದ್ರ ಕಚೇರಿಯನ್ನು ವಶಪಡಿಸಿಕೊಂಡಿದ್ದೇವೆ, ”ಎಂದು ಅವರು ಹೇಳಿದರು. ನಮ್ಮ ಪಡೆಗಳು ಒಬ್ಬನೇ ಒಬ್ಬ ಸೈನಿಕನನ್ನೂ ಮುಟ್ಟಿಲ್ಲ. ನಮ್ಮ ದಾರಿಯಲ್ಲಿ ನಾವು ಯಾರನ್ನೂ ಹತ್ಯೆ ಮಾಡಿಲ್ಲ, ಆದರೆ ನಮ್ಮ ಯೋಧರ ಮೇಲೆ ಫಿರಂಗಿ ಮತ್ತು ನಂತರ ಹೆಲಿಕಾಪ್ಟರ್‌ಗಳಿಂದ ದಾಳಿ ನಡೆಸಲಾಗಿದೆ ಎಂದು ಪ್ರಿಗೊಜಿನ್ ಹೇಳಿದ್ದಾರೆ.  ರೊಸ್ತೋವ್ ನಲ್ಲಿಯೂ ಸ್ಥಳೀಯರ ಬೆಂಬಲ ನಮಗೆ ಇದೆ ಎಂದು ಪುಟಿನ್ ಹೇಳಿದ್ದಾರೆ.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

8 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

8 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

8 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

8 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago