BREAKING NEWS

ವಿಸಿ ನಾಲೆಗೆ ಉರುಳಿದ ಕಾರು : ನಾಲ್ವರ ದುರ್ಮರಣ

ಮಂಡ್ಯ : ವಿಸಿ ನಾಲೆಗೆ ಕಾರು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಕಾರು ನಾಲೆಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮಹಿಳೆಯರು ಮೃತಪಟ್ಟ ಘಟನೆ ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ ಶನಿವಾರ ರಾತ್ರಿ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಬ್ರಾಂಚ್‌ನ ವಿಶ್ವೇಶ್ವರಯ್ಯ ಉಪ ನಾಲೆಗೆ ಇಂಡಿಕಾ ಕಾರು ಉರುಳಿ ಬಿದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಟಿ.ನರಸೀಪುರ ತಾಲೂಕು ಗೊರವನಹಳ್ಳಿ ಗ್ರಾಮದ ದೊಡ್ಡಯ್ಯ ಎಂಬುವರ ಪತ್ನಿ ಮಹದೇವಮ್ಮ, ಸಂಬಂಧಿಕರಾದ ರೇಖಾ, ಸಂಜನಾ, ಮಹದೇವಿ ಮೃತಪಟ್ಟಿದ್ದಾರೆ.

ನಾಲ್ವರು ಮಹಿಳೆಯರು ನಾಲೆಯ ನೀರಿನಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಕಾರು ಚಾಲಕ ಮನೋಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ನಾಲ್ವರು ಮಹಿಳೆಯರ ಶವವನ್ನು ನೀರಿನಿಂದ ಹೊರ ತೆಗೆದಿದ್ದಾರೆ‌.

ತಡೆಗೋಡೆಗೆ ಡಿಕ್ಕಿ ಹೊಡೆದು ನಾಲೆಗೆ ಕಾರು ಬಿದ್ದಿದೆ. ಚಾಲಕ ವೇಗವಾಗಿ ಕಾರನ್ನು ಚಲಾಯಿಸಿದ್ದರಿಂದ ಈ ದುರ್ಘಟನೆ ಸಂಭವಿಸರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ್, ಎಸ್.ಪಿ ಯತೀಶ್ ಭೇಟಿ ನೀಡಿದ್ದಾರೆ.

ಆದಿಚುಂಚನಗಿರಿಯಲ್ಲಿ ಮಹದೇವಮ್ಮ ಅವರ ಮನೆಯವರು ಆಯೋಜನೆ ಮಾಡಲಿದ್ದ ದೇವರ ಕಾರ್ಯಕ್ಕೆ ಸಂಬಂಧಿಕರನ್ನು ಆಹ್ವಾನಿಸಲು ಗೊರವನಹಳ್ಳಿಯಿಂದ ದೊಡ್ಡಮಲಗೂಡಿಗೆ ಚಾಲಕ ಸೇರಿ ಐದು ಮಂದಿ ಹೋಗುತ್ತಿದ್ದರು. ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

6 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

11 mins ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

32 mins ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

49 mins ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

1 hour ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

2 hours ago