ಮಂಡ್ಯ : ವಿಸಿ ನಾಲೆಗೆ ಕಾರು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಕಾರು ನಾಲೆಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮಹಿಳೆಯರು ಮೃತಪಟ್ಟ ಘಟನೆ ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ ಶನಿವಾರ ರಾತ್ರಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಬ್ರಾಂಚ್ನ ವಿಶ್ವೇಶ್ವರಯ್ಯ ಉಪ ನಾಲೆಗೆ ಇಂಡಿಕಾ ಕಾರು ಉರುಳಿ ಬಿದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಟಿ.ನರಸೀಪುರ ತಾಲೂಕು ಗೊರವನಹಳ್ಳಿ ಗ್ರಾಮದ ದೊಡ್ಡಯ್ಯ ಎಂಬುವರ ಪತ್ನಿ ಮಹದೇವಮ್ಮ, ಸಂಬಂಧಿಕರಾದ ರೇಖಾ, ಸಂಜನಾ, ಮಹದೇವಿ ಮೃತಪಟ್ಟಿದ್ದಾರೆ.
ನಾಲ್ವರು ಮಹಿಳೆಯರು ನಾಲೆಯ ನೀರಿನಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಕಾರು ಚಾಲಕ ಮನೋಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ನಾಲ್ವರು ಮಹಿಳೆಯರ ಶವವನ್ನು ನೀರಿನಿಂದ ಹೊರ ತೆಗೆದಿದ್ದಾರೆ.
ತಡೆಗೋಡೆಗೆ ಡಿಕ್ಕಿ ಹೊಡೆದು ನಾಲೆಗೆ ಕಾರು ಬಿದ್ದಿದೆ. ಚಾಲಕ ವೇಗವಾಗಿ ಕಾರನ್ನು ಚಲಾಯಿಸಿದ್ದರಿಂದ ಈ ದುರ್ಘಟನೆ ಸಂಭವಿಸರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ್, ಎಸ್.ಪಿ ಯತೀಶ್ ಭೇಟಿ ನೀಡಿದ್ದಾರೆ.
ಆದಿಚುಂಚನಗಿರಿಯಲ್ಲಿ ಮಹದೇವಮ್ಮ ಅವರ ಮನೆಯವರು ಆಯೋಜನೆ ಮಾಡಲಿದ್ದ ದೇವರ ಕಾರ್ಯಕ್ಕೆ ಸಂಬಂಧಿಕರನ್ನು ಆಹ್ವಾನಿಸಲು ಗೊರವನಹಳ್ಳಿಯಿಂದ ದೊಡ್ಡಮಲಗೂಡಿಗೆ ಚಾಲಕ ಸೇರಿ ಐದು ಮಂದಿ ಹೋಗುತ್ತಿದ್ದರು. ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…
ಮಡಿಕೇರಿ : ಪ್ರವಾಸಿಗರ ಬಸ್ವೊಂದು ಕಾರಿನ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…
ಅನುಮತಿಗಾಗಿ ಕಾಯುತ್ತಿರುವ ಮತ್ತೆರಡು ಹಡಗುಗಳು ಹೊಸದಿಲ್ಲಿ : ಸುಮಾರು 46,000 ಮೆಟ್ರಿಕ್ ಟನ್ಗಳಿಗೂ ಹೆಚ್ಚು ಇಂಧನ ಹೊತ್ತ ದೊಡ್ಡ ದ್ರವೀಕೃತ…
ಬೆಂಗಳೂರು : ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರು ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದರೆ, ಜನಪ್ರತಿನಿಧಿಗಳಾದ ಶಾಸಕರು ಮಾತ್ರ ಐಪಿಎಲ್ ಟಿಕೆಟ್ಗಳ…