ಮಂಡ್ಯ : ವಿಸಿ ನಾಲೆಗೆ ಕಾರು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಕಾರು ನಾಲೆಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮಹಿಳೆಯರು ಮೃತಪಟ್ಟ ಘಟನೆ ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ ಶನಿವಾರ ರಾತ್ರಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಬ್ರಾಂಚ್ನ ವಿಶ್ವೇಶ್ವರಯ್ಯ ಉಪ ನಾಲೆಗೆ ಇಂಡಿಕಾ ಕಾರು ಉರುಳಿ ಬಿದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಟಿ.ನರಸೀಪುರ ತಾಲೂಕು ಗೊರವನಹಳ್ಳಿ ಗ್ರಾಮದ ದೊಡ್ಡಯ್ಯ ಎಂಬುವರ ಪತ್ನಿ ಮಹದೇವಮ್ಮ, ಸಂಬಂಧಿಕರಾದ ರೇಖಾ, ಸಂಜನಾ, ಮಹದೇವಿ ಮೃತಪಟ್ಟಿದ್ದಾರೆ.
ನಾಲ್ವರು ಮಹಿಳೆಯರು ನಾಲೆಯ ನೀರಿನಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಕಾರು ಚಾಲಕ ಮನೋಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ನಾಲ್ವರು ಮಹಿಳೆಯರ ಶವವನ್ನು ನೀರಿನಿಂದ ಹೊರ ತೆಗೆದಿದ್ದಾರೆ.
ತಡೆಗೋಡೆಗೆ ಡಿಕ್ಕಿ ಹೊಡೆದು ನಾಲೆಗೆ ಕಾರು ಬಿದ್ದಿದೆ. ಚಾಲಕ ವೇಗವಾಗಿ ಕಾರನ್ನು ಚಲಾಯಿಸಿದ್ದರಿಂದ ಈ ದುರ್ಘಟನೆ ಸಂಭವಿಸರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ್, ಎಸ್.ಪಿ ಯತೀಶ್ ಭೇಟಿ ನೀಡಿದ್ದಾರೆ.
ಆದಿಚುಂಚನಗಿರಿಯಲ್ಲಿ ಮಹದೇವಮ್ಮ ಅವರ ಮನೆಯವರು ಆಯೋಜನೆ ಮಾಡಲಿದ್ದ ದೇವರ ಕಾರ್ಯಕ್ಕೆ ಸಂಬಂಧಿಕರನ್ನು ಆಹ್ವಾನಿಸಲು ಗೊರವನಹಳ್ಳಿಯಿಂದ ದೊಡ್ಡಮಲಗೂಡಿಗೆ ಚಾಲಕ ಸೇರಿ ಐದು ಮಂದಿ ಹೋಗುತ್ತಿದ್ದರು. ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…