ಮಂಡ್ಯ : ವಿಸಿ ನಾಲೆಗೆ ಕಾರು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಕಾರು ನಾಲೆಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮಹಿಳೆಯರು ಮೃತಪಟ್ಟ ಘಟನೆ ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ ಶನಿವಾರ ರಾತ್ರಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಬ್ರಾಂಚ್ನ ವಿಶ್ವೇಶ್ವರಯ್ಯ ಉಪ ನಾಲೆಗೆ ಇಂಡಿಕಾ ಕಾರು ಉರುಳಿ ಬಿದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಟಿ.ನರಸೀಪುರ ತಾಲೂಕು ಗೊರವನಹಳ್ಳಿ ಗ್ರಾಮದ ದೊಡ್ಡಯ್ಯ ಎಂಬುವರ ಪತ್ನಿ ಮಹದೇವಮ್ಮ, ಸಂಬಂಧಿಕರಾದ ರೇಖಾ, ಸಂಜನಾ, ಮಹದೇವಿ ಮೃತಪಟ್ಟಿದ್ದಾರೆ.
ನಾಲ್ವರು ಮಹಿಳೆಯರು ನಾಲೆಯ ನೀರಿನಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಕಾರು ಚಾಲಕ ಮನೋಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ನಾಲ್ವರು ಮಹಿಳೆಯರ ಶವವನ್ನು ನೀರಿನಿಂದ ಹೊರ ತೆಗೆದಿದ್ದಾರೆ.
ತಡೆಗೋಡೆಗೆ ಡಿಕ್ಕಿ ಹೊಡೆದು ನಾಲೆಗೆ ಕಾರು ಬಿದ್ದಿದೆ. ಚಾಲಕ ವೇಗವಾಗಿ ಕಾರನ್ನು ಚಲಾಯಿಸಿದ್ದರಿಂದ ಈ ದುರ್ಘಟನೆ ಸಂಭವಿಸರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ್, ಎಸ್.ಪಿ ಯತೀಶ್ ಭೇಟಿ ನೀಡಿದ್ದಾರೆ.
ಆದಿಚುಂಚನಗಿರಿಯಲ್ಲಿ ಮಹದೇವಮ್ಮ ಅವರ ಮನೆಯವರು ಆಯೋಜನೆ ಮಾಡಲಿದ್ದ ದೇವರ ಕಾರ್ಯಕ್ಕೆ ಸಂಬಂಧಿಕರನ್ನು ಆಹ್ವಾನಿಸಲು ಗೊರವನಹಳ್ಳಿಯಿಂದ ದೊಡ್ಡಮಲಗೂಡಿಗೆ ಚಾಲಕ ಸೇರಿ ಐದು ಮಂದಿ ಹೋಗುತ್ತಿದ್ದರು. ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…