BREAKING NEWS

ಎಕ್ಸಾಂ ಹಾಲ್‌ಗೆ ಬರುವಾಗ ಹೃದಯ ಸ್ತಂಭನ : 9ನೇ ತರಗತಿ ವಿದ್ಯಾರ್ಥಿನಿ ಸಾವು

ಅಮ್ರೇಲಿ : ಎಕ್ಸಾಂ ಹಾಲ್‌ಗೆ ಬಂದ 9ನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರೋ ದಾರಣ ಘಟನೆ ಗುಜರಾತ್‌ನಲ್ಲಿ ನಡೆದಿದೆ. ವಿದ್ಯಾರ್ಥಿನಿ ಸಾಕ್ಷಿ ರಾಜೋಸಾರ ಹೃದಯ ಸ್ತಂಭನದಿಂದಲೇ ಕೊನೆಯುಸಿರೆಳೆದಿರುವ ಶಂಕೆ ವ್ಯಕ್ತವಾಗಿದೆ. ಪರೀಕ್ಷಾ ಕೇಂದ್ರದಲ್ಲಿ 15 ವರ್ಷದ ಬಾಲಕಿ ಹಠಾತ್ ಸಾವನ್ನಪ್ಪಿರೋದು ಆತಂಕವನ್ನು ಹೆಚ್ಚಿಸಿದೆ.

ಗುಜರಾತ್ ಅಮ್ರೇಲಿಯ ಶಾಂತಬಾ ಗಜೇರಾ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಸಾಕ್ಷಿ ರಾಜೋಸಾರ ಎಂಬ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಶಾಲೆಗೆ ಬಂದಿದ್ದಳು. ಈ ವೇಳೆ ಕ್ಲಾಸ್‌ ರೂಮ್‌ ಪ್ರವೇಶಿಸುವಾಗ ಕೆಳಗೆ ಬಿದ್ದಿದ್ದಾಳೆ. ತರಗತಿಯಲ್ಲಿದ್ದ ಶಿಕ್ಷಕರು ಮತ್ತು ಸಹಪಾಠಿಗಳು ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಚಿಕಿತ್ಸೆ ನೀಡಿದ ವೈದ್ಯರು ಬಾಲಕಿಯು ಹೃದಯ ಸ್ತಂಭನದಿಂದಲೇ ಸಾವನ್ನಪ್ಪಿದ್ದಾಳೆ ಎಂದು ಹೇಳಿದ್ದಾರೆ.

ಗುಜರಾತ್‌ನಲ್ಲಿ ಇತ್ತೀಚೆಗೆ ಗರ್ಬಾ ನೃತ್ಯದ ವೇಳೆ ಹಲವರು ಹೃದಯಾಘಾತಕ್ಕೆ ಒಳಗಾಗಿದ್ದರು. ಕೇವಲ 24 ಗಂಟೆಯಲ್ಲೇ 10 ಮಂದಿ ಸಾವನ್ನಪ್ಪಿದ್ದು ಬೆಚ್ಚಿ ಬೀಳುವಂತೆ ಮಾಡಿತ್ತು. ಈ ದುರಂತ ಮಾಸುವ ಮುನ್ನವೇ ಗುಜರಾತ್‌ನಲ್ಲಿ 15 ವರ್ಷದ ಬಾಲಕಿ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾಳೆ. ಗುಜರಾತ್‌ನಲ್ಲಿ ಹೃದಯಾಘಾತ, ಹೃದಯಸ್ತಂಭನದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಳವಾಗಿರೋದು ಆತಂಕಕ್ಕೆ ಕಾರಣವಾಗಿದೆ.

lokesh

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

9 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

9 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

10 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

10 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

11 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

12 hours ago