BREAKING NEWS

ಎಕ್ಸಾಂ ಹಾಲ್‌ಗೆ ಬರುವಾಗ ಹೃದಯ ಸ್ತಂಭನ : 9ನೇ ತರಗತಿ ವಿದ್ಯಾರ್ಥಿನಿ ಸಾವು

ಅಮ್ರೇಲಿ : ಎಕ್ಸಾಂ ಹಾಲ್‌ಗೆ ಬಂದ 9ನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರೋ ದಾರಣ ಘಟನೆ ಗುಜರಾತ್‌ನಲ್ಲಿ ನಡೆದಿದೆ. ವಿದ್ಯಾರ್ಥಿನಿ ಸಾಕ್ಷಿ ರಾಜೋಸಾರ ಹೃದಯ ಸ್ತಂಭನದಿಂದಲೇ ಕೊನೆಯುಸಿರೆಳೆದಿರುವ ಶಂಕೆ ವ್ಯಕ್ತವಾಗಿದೆ. ಪರೀಕ್ಷಾ ಕೇಂದ್ರದಲ್ಲಿ 15 ವರ್ಷದ ಬಾಲಕಿ ಹಠಾತ್ ಸಾವನ್ನಪ್ಪಿರೋದು ಆತಂಕವನ್ನು ಹೆಚ್ಚಿಸಿದೆ.

ಗುಜರಾತ್ ಅಮ್ರೇಲಿಯ ಶಾಂತಬಾ ಗಜೇರಾ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಸಾಕ್ಷಿ ರಾಜೋಸಾರ ಎಂಬ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಶಾಲೆಗೆ ಬಂದಿದ್ದಳು. ಈ ವೇಳೆ ಕ್ಲಾಸ್‌ ರೂಮ್‌ ಪ್ರವೇಶಿಸುವಾಗ ಕೆಳಗೆ ಬಿದ್ದಿದ್ದಾಳೆ. ತರಗತಿಯಲ್ಲಿದ್ದ ಶಿಕ್ಷಕರು ಮತ್ತು ಸಹಪಾಠಿಗಳು ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಚಿಕಿತ್ಸೆ ನೀಡಿದ ವೈದ್ಯರು ಬಾಲಕಿಯು ಹೃದಯ ಸ್ತಂಭನದಿಂದಲೇ ಸಾವನ್ನಪ್ಪಿದ್ದಾಳೆ ಎಂದು ಹೇಳಿದ್ದಾರೆ.

ಗುಜರಾತ್‌ನಲ್ಲಿ ಇತ್ತೀಚೆಗೆ ಗರ್ಬಾ ನೃತ್ಯದ ವೇಳೆ ಹಲವರು ಹೃದಯಾಘಾತಕ್ಕೆ ಒಳಗಾಗಿದ್ದರು. ಕೇವಲ 24 ಗಂಟೆಯಲ್ಲೇ 10 ಮಂದಿ ಸಾವನ್ನಪ್ಪಿದ್ದು ಬೆಚ್ಚಿ ಬೀಳುವಂತೆ ಮಾಡಿತ್ತು. ಈ ದುರಂತ ಮಾಸುವ ಮುನ್ನವೇ ಗುಜರಾತ್‌ನಲ್ಲಿ 15 ವರ್ಷದ ಬಾಲಕಿ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾಳೆ. ಗುಜರಾತ್‌ನಲ್ಲಿ ಹೃದಯಾಘಾತ, ಹೃದಯಸ್ತಂಭನದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಳವಾಗಿರೋದು ಆತಂಕಕ್ಕೆ ಕಾರಣವಾಗಿದೆ.

lokesh

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

6 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

6 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

6 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

6 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

18 hours ago