ಅಮ್ರೇಲಿ : ಎಕ್ಸಾಂ ಹಾಲ್ಗೆ ಬಂದ 9ನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರೋ ದಾರಣ ಘಟನೆ ಗುಜರಾತ್ನಲ್ಲಿ ನಡೆದಿದೆ. ವಿದ್ಯಾರ್ಥಿನಿ ಸಾಕ್ಷಿ ರಾಜೋಸಾರ ಹೃದಯ ಸ್ತಂಭನದಿಂದಲೇ ಕೊನೆಯುಸಿರೆಳೆದಿರುವ ಶಂಕೆ ವ್ಯಕ್ತವಾಗಿದೆ. ಪರೀಕ್ಷಾ ಕೇಂದ್ರದಲ್ಲಿ 15 ವರ್ಷದ ಬಾಲಕಿ ಹಠಾತ್ ಸಾವನ್ನಪ್ಪಿರೋದು ಆತಂಕವನ್ನು ಹೆಚ್ಚಿಸಿದೆ.
ಗುಜರಾತ್ ಅಮ್ರೇಲಿಯ ಶಾಂತಬಾ ಗಜೇರಾ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಸಾಕ್ಷಿ ರಾಜೋಸಾರ ಎಂಬ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಶಾಲೆಗೆ ಬಂದಿದ್ದಳು. ಈ ವೇಳೆ ಕ್ಲಾಸ್ ರೂಮ್ ಪ್ರವೇಶಿಸುವಾಗ ಕೆಳಗೆ ಬಿದ್ದಿದ್ದಾಳೆ. ತರಗತಿಯಲ್ಲಿದ್ದ ಶಿಕ್ಷಕರು ಮತ್ತು ಸಹಪಾಠಿಗಳು ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಚಿಕಿತ್ಸೆ ನೀಡಿದ ವೈದ್ಯರು ಬಾಲಕಿಯು ಹೃದಯ ಸ್ತಂಭನದಿಂದಲೇ ಸಾವನ್ನಪ್ಪಿದ್ದಾಳೆ ಎಂದು ಹೇಳಿದ್ದಾರೆ.
ಗುಜರಾತ್ನಲ್ಲಿ ಇತ್ತೀಚೆಗೆ ಗರ್ಬಾ ನೃತ್ಯದ ವೇಳೆ ಹಲವರು ಹೃದಯಾಘಾತಕ್ಕೆ ಒಳಗಾಗಿದ್ದರು. ಕೇವಲ 24 ಗಂಟೆಯಲ್ಲೇ 10 ಮಂದಿ ಸಾವನ್ನಪ್ಪಿದ್ದು ಬೆಚ್ಚಿ ಬೀಳುವಂತೆ ಮಾಡಿತ್ತು. ಈ ದುರಂತ ಮಾಸುವ ಮುನ್ನವೇ ಗುಜರಾತ್ನಲ್ಲಿ 15 ವರ್ಷದ ಬಾಲಕಿ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾಳೆ. ಗುಜರಾತ್ನಲ್ಲಿ ಹೃದಯಾಘಾತ, ಹೃದಯಸ್ತಂಭನದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಳವಾಗಿರೋದು ಆತಂಕಕ್ಕೆ ಕಾರಣವಾಗಿದೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…